ಹೊಸಪೇಟೆ (ವಿಜಯನಗರ): ವಿಜಯನಗರ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶ ಹಿಂಪಡೆದಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ಜು. 29ರಂದು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿ ಹಿಂಪಡೆಯಲಾಗಿದೆ ಎಂದು ಶನಿವಾರ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಲತಿ ಸಿ. ಆದೇಶ ಹೊರಡಿಸಿದ್ದಾರೆ.
ಇದಕ್ಕೂ ಮುನ್ನ ಸರ್ಕಾರವು ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಅವರನ್ನು ಕೊಪ್ಪಳದಿಂದ ವಿಜಯನಗರಕ್ಕೆ ಹಾಗೂ ಮುಜರಾಯಿ ಖಾತೆ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರನ್ನು ವಿಜಯನಗರದಿಂದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಈಗ ಆದೇಶ ರದ್ದುಪಡಿಸಿರುವುದರಿಂದ ಇಬ್ಬರೂ ಸಚಿವರು ಹಿಂದಿನ ಜಿಲ್ಲೆಯ ಉಸ್ತುವಾರಿಗಳಾಗಿ ಮುಂದುವರೆಯಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.