ADVERTISEMENT

ವಿಜಯನಗರ| ಆಕಸ್ಮಿಕ ಬೆಂಕಿಗೆ ಮೇವು ಭಸ್ಮ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 12:22 IST
Last Updated 31 ಮಾರ್ಚ್ 2023, 12:22 IST
   

ಕಾನಹೊಸಹಳ್ಳಿ (ವಿಜಯನಗರ ಜಿಲ್ಲೆ): ಸಮೀಪದ ನಿಂಬಳಗೇರೆಯ ಕಣವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ಮೇವು ಭಸ್ಮವಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ಗ್ರಾಮದ ತೋಟದ ಬಸವರಾಜ ಎಂಬುವವರಿಗೆ ಸೇರಿದ ಕಣಕ್ಕೆ ಬೆಂಕಿ ತಗುಲಿದ್ದು, 2 ಲೋಡ್ ಶೇಂಗಾ ಹುಲ್ಲು, 1 ಲೋಡ್ ರಾಗಿ ಹುಲ್ಲು, 4 ಲೋಡ್ ಮೆಕ್ಕೆಜೋಳ ಸೊಪ್ಪೆಯ ಬಣವೆಗಳು ಬೆಂಕಿಗೆ ಅಹುತಿಯಾಗಿವೆ.

ಬೆಂಕಿ ಹೊತ್ತಿದ್ದ ಕೂಡಲೇ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಆದರೆ, ನಿಯಂತ್ರಣಕ್ಕೆ ಬರಲಿಲ್ಲ. ಅನಂತರ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ‌ ದಳದ ಸಿಬ್ಬಂದಿ ಗ್ರಾಮಸ್ಥರ ನೆರವಿನಿಂದ ಬೆಂಕಿ ನಂದಿಸಿದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.