ADVERTISEMENT

‘ನಾಡಿಗೆ ವಿಜಯನಗರ ಕೊಡುಗೆ ಅಪಾರ’

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 13:49 IST
Last Updated 14 ನವೆಂಬರ್ 2022, 13:49 IST
ಹೊಸಪೇಟೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಆರ್‌. ವಿಜಯಕುಮಾರ್‌ ಅವರು ವಿಜಯನಗರ ನೂತನ ಜಿಲ್ಲಾಧ್ಯಕ್ಷ ವಿರೂಪಾಕ್ಷಿ ಅವರಿಗೆ ನೇಮಕ ಪತ್ರ ಹಸ್ತಾಂತರಿಸಿದರು
ಹೊಸಪೇಟೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಆರ್‌. ವಿಜಯಕುಮಾರ್‌ ಅವರು ವಿಜಯನಗರ ನೂತನ ಜಿಲ್ಲಾಧ್ಯಕ್ಷ ವಿರೂಪಾಕ್ಷಿ ಅವರಿಗೆ ನೇಮಕ ಪತ್ರ ಹಸ್ತಾಂತರಿಸಿದರು   

ಹೊಸಪೇಟೆ (ವಿಜಯನಗರ): ‘ಕರುನಾಡಿಗೆ ವಿಜಯನಗರ ಜಿಲ್ಲೆಯ ಕೊಡುಗೆ ಅಪಾರವಾಗಿದೆ’ ಎಂದು ಕನ್ನಡ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಆರ್‌. ವಿಜಯಕುಮಾರ್‌ ತಿಳಿಸಿದರು.

ರಕ್ಷಣಾ ವೇದಿಕೆ ಹಾಗೂ ಅಪ್ಪು ಸೇನೆಯಿಂದ ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ವಹಿಸಿ ಮಾತನಾಡಿದರು.

ಕನ್ನಡ ನಾಡಿನ ಶ್ರೀಮಂತ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ನೆಲ, ಜಲ ಸಂರಕ್ಷಣೆಯಲ್ಲಿ ವಿಜಯನಗರ ಸಾಮ್ರಾಜ್ಯದ ಪಾತ್ರ ಹಿರಿದಾಗಿದೆ. ನೂತನ ಪದಾಧಿಕಾರಿಗಳು ನಾಡು, ನುಡಿ ರಕ್ಷಣೆಗೆ ಸದಾ ಶ್ರಮಿಸಬೇಕೆಂದು ಕಿವಿಮಾತು ಹೇಳಿದರು.

ADVERTISEMENT

ನೂತನ ಪದಾಧಿಕಾರಿಗಳ ವಿವರ ಇಂತಿದೆ: ವಿರೂಪಾಕ್ಷಿ ವಿ ಹಂಪಿ–ಜಿಲ್ಲಾಧ್ಯಕ್ಷ, ಚೌಡಪ್ಪ–ಜಿಲ್ಲಾ ಉಪಾಧ್ಯಕ್ಷ, ಪರಶುರಾಮ–ಪ್ರಧಾನ ಕಾರ್ಯದರ್ಶಿ, ಮಂಜುನಾಥ–ಸಂಘಟನಾ ಕಾರ್ಯದರ್ಶಿ, ಯಲ್ಲಪ್ಪ ಕರಿ–ಖಜಾಂಚಿ, ವಿ. ಕುಮಾರ್–ರಾಜ್ಯ ಸಂಘಟನಾ ಕಾರ್ಯದರ್ಶಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.