ADVERTISEMENT

ವಿಜಯನಗರ | ಸದಾಶಿವ ಪ್ರಭು ಜಿ.ಪಂ ಹೊಸ ಸಿಇಒ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2023, 12:54 IST
Last Updated 2 ಫೆಬ್ರುವರಿ 2023, 12:54 IST
ಸದಾಶಿವ ಪ್ರಭು ಬಿ.
ಸದಾಶಿವ ಪ್ರಭು ಬಿ.    

ಹೊಸಪೇಟೆ (ವಿಜಯನಗರ): ಸದಾಶಿವ ಪ್ರಭು ಬಿ. ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗುರುವಾರ ನಗರದಲ್ಲಿ ಅಧಿಕಾರ ಸ್ವೀಕರಿಸಿದರು.

ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಮುಖ್ಯ ಯೋಜನಾಧಿಕಾರಿ ಅನ್ನದಾನ ಸ್ವಾಮಿ, ಸಹಾಯಕ ಕಾರ್ಯದರ್ಶಿ ಉಮೇಶ್ ಹಾಗೂ ಸಿಬ್ಬಂದಿ ಹಾಜರಿದ್ದರು. ಜ. 31ರಂದು ಹರ್ಷಲ್‌ ಭೋಯರ್‌ ನಾರಾಯಣರಾವ್‌ ಅವರನ್ನು ಸಿಇಒ ಹುದ್ದೆಯಿಂದ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿತ್ತು. ಅವರ ಜಾಗಕ್ಕೆ ಪ್ರಭು ಅವರನ್ನು ನೇಮಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT