ಹೊಸಪೇಟೆ (ವಿಜಯನಗರ): ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯಾದ್ಯಂತ ಶನಿವಾರ (ನ.20) ಶಾಲಾ, ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ಶುಕ್ರವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.
ಮಕ್ಕಳ ಹಿತದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ. ರಜೆ ಘೋಷಿಸಿರುವ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಬೇಕೆಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.