ADVERTISEMENT

ವಿಜಯನಗರ: ಸ್ವಾಮೀಜಿಗಳಿಂದ ‘ದಿ ಕಾಶ್ಮೀರ್ ಫೈಲ್ಸ್‌’ ಸಿನಿಮಾ ವೀಕ್ಷಣೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2022, 6:07 IST
Last Updated 15 ಮಾರ್ಚ್ 2022, 6:07 IST
ಸಿನಿಮಾ ನೋಡಲು ಬಂದ ಸ್ವಾಮೀಜಿಗಳನ್ನು ಭಕ್ತರು ಹೂಮಾಲೆ ಹಾಕಿ ಸ್ವಾಗತಿಸಿದರು – ಪ್ರಜಾವಾಣಿ ಚಿತ್ರ
ಸಿನಿಮಾ ನೋಡಲು ಬಂದ ಸ್ವಾಮೀಜಿಗಳನ್ನು ಭಕ್ತರು ಹೂಮಾಲೆ ಹಾಕಿ ಸ್ವಾಗತಿಸಿದರು – ಪ್ರಜಾವಾಣಿ ಚಿತ್ರ   

ಹೊಸಪೇಟೆ (ವಿಜಯನಗರ): ಜಿಲ್ಲೆಯ ವಿವಿಧ ಮಠಗಳ ಆರು ಜನ ಸ್ವಾಮೀಜಿಗಳು ಮಂಗಳವಾರ ನಗರದ ಸರಸ್ವತಿ ಚಿತ್ರಮಂದಿರದಲ್ಲಿ ‘ದಿ ಕಾಶ್ಮೀರ್ ಫೈಲ್ಸ್‌’ ಸಿನಿಮಾ ವೀಕ್ಷಿಸಿದರು.

ಹಾಲಸ್ವಾಮಿ ಮಠದ ಹಾಲ ಸ್ವಾಮೀಜಿ, ನಂದಿಪುರದ ಮಹೇಶ್ವರ ಸ್ವಾಮೀಜಿ, ಬೆಣ್ಣೆಹಳ್ಳಿ ಪಂಚಾಕ್ಷರಿ ಸ್ವಾಮೀಜಿ, ಚಾನುಕೋಟಿ ಸಿದ್ಧಲಿಂಗ ಸ್ವಾಮೀಜಿ, ಉತ್ತಂಗಿಯ ಸೋಮಶೇಖರ್ ಸ್ವಾಮೀಜಿ, ಗದ್ದಿಕೇರಿಯ ಚರಂತೇಶ್ವರ ಸ್ವಾಮೀಜಿ ಅವರು ಒಟ್ಟಿಗೆ ಚಿತ್ರಮಂದಿರಕ್ಕೆ ಬಂದರು.

ಅವರಿಗೆ ಭಕ್ತರು ಹೂಮಾಲೆ ಹಾಕಿ ಸ್ವಾಗತಿಸಿದರು. ಎಲ್ಲ ಸ್ವಾಮೀಜಿಗಳು ಆರಂಭದಿಂದ ಕೊನೆಯವರೆಗೆ ಕುಳಿತು ಸಿನಿಮಾ ನೋಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.