ADVERTISEMENT

ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 14:35 IST
Last Updated 20 ಫೆಬ್ರುವರಿ 2021, 14:35 IST
   

ವಿಜಯನಗರ (ಹೊಸಪೇಟೆ): ಹೂವಿನಹಡಗಲಿ ತಾಲ್ಲೂಕಿನ ಮೈಲಾರದ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ಅಣೆಕಟ್ಟೆಗೆ ನೀರು ಹರಿಸಲಾಗುತ್ತಿದೆ.

‘ಕಾರ್ಣಿಕೋತ್ಸವಕ್ಕೆ ಅಪಾರ ಭಕ್ತರು ಬರುತ್ತಾರೆ. ಪ್ರತಿ ವರ್ಷ ಜಾತ್ರೆ ಸಂದರ್ಭದಲ್ಲಿ ನೀರು ಹರಿಸಲಾಗುತ್ತದೆ. ಅದರಂತೆ ಈ ವರ್ಷವೂ ನೀರು ಬಿಡಲಾಗುತ್ತಿದೆ. ಸಾರ್ವಜನಿಕರು ನದಿ ಬಳಿ ತಿರುಗಾಡುವುದು, ದನಕರುಗಳನ್ನು ಮೇಯಿಸುವುದು, ನದಿಗೆ ಇಳಿಯುವುದು ಮಾಡಬಾರದು.

ನದಿದಂಡೆಯಿಂದ ಪಂಪ್‌ ಸೆಟ್‌ ಮೂಲಕ ನೀರೆತ್ತುವುದನ್ನು ಸಹ ನಿಷೇಧಿಸಲಾಗಿದೆ ಎಂದು ಶನಿವಾರ ಮಂಡಳಿ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.