ADVERTISEMENT

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 16:22 IST
Last Updated 22 ಏಪ್ರಿಲ್ 2021, 16:22 IST

ಹೊಸಪೇಟೆ (ವಿಜಯನಗರ): ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಇಲ್ಲಿನ ಟಿ.ಬಿ. ಡ್ಯಾಂ ಎಚ್‌.ಎಸ್‌. ಕಾಲೊನಿ ನಿವಾಸಿ ಎನ್‌. ರಮೇಶ (29) ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ರಮೇಶ ಮೂರು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ಮನೆಯವರು ಸಾಕಷ್ಟು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಬುಧವಾರ ಸಂಜೆ ಮನೆ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಜೀವ ಬಿಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಟಿ.ಬಿ. ಡ್ಯಾಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT