ADVERTISEMENT

ಚುನಾವಣೆ; 10 ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2018, 10:33 IST
Last Updated 20 ಏಪ್ರಿಲ್ 2018, 10:33 IST

ವಿಜಯಪುರ: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಗುರುವಾರ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ, ಏಳು ವಿಧಾನಸಭಾ ಕ್ಷೇತ್ರಗಳಿಗೆ 10 ನಾಮಪತ್ರ ಸಲ್ಲಿಕೆಯಾಗಿವೆ.

ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಿಂದ ಜಾತ್ಯತೀತ ಜನತಾ ದಳದ ಅಭ್ಯರ್ಥಿಯಾಗಿ ಮಂಗಳಾದೇವಿ ಬಿರಾದಾರ, ಜನಸಾಮಾನ್ಯರ ಪಕ್ಷದಿಂದ ಅಯ್ಯಪ್ಪ ದೊರೆ ನಾಮಪತ್ರ ಸಲ್ಲಿಸಿದ್ದಾರೆ.

ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸೋಮನಗೌಡ ಬಸನಗೌಡ ಪಾಟೀಲ, ಜೆಡಿಎಸ್‌ನಿಂದ ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಕಾಂಗ್ರೆಸ್‌ನಿಂದ ಬಾಪುಗೌಡ ಶಂಕರಗೌಡ ಪಾಟೀಲ ನಾಮಪತ್ರ ಸಲ್ಲಿಸಿದ್ದಾರೆ. ಮೂರು ಪಕ್ಷಗಳ ಪ್ರಮುಖ ಅಭ್ಯರ್ಥಿಗಳು ಒಂದೇ ದಿನ ನಾಮಪತ್ರ ಸಲ್ಲಿಸಿರುವುದು ವಿಶೇಷ.

ADVERTISEMENT

ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸೋಮನಗೌಡ ಪಾಟೀಲ ನಾಮಪತ್ರ ಸಲ್ಲಿಸಿದ್ದಾರೆ. ಬಬಲೇಶ್ವರದಿಂದ ಬಿಜೆಪಿ ಅಭ್ಯರ್ಥಿಯಾಗಿ ವಿಜಯಕುಮಾರ ಪಾಟೀಲ ನಾಮಪತ್ರ ಸಲ್ಲಿಸಿದ್ದಾರೆ.

ನಾಗಠಾಣ ವಿಧಾನಸಭಾ ಕ್ಷೇತ್ರದಿಂದ ಶಿವಸೇನಾ ಪಕ್ಷದಿಂದ ಮರಗಣ್ಣ ಮಾಳಪ್ಪ ಹುನ್ನೂರ, ಇಂಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಯಶವಂತರಾಯಗೌಡ ಪಾಟೀಲ, ಸಿಂದಗಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಭೂಸನೂರ ರಮೇಶ ಬಾಳಪ್ಪ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.