ADVERTISEMENT

ನೀತಿ ಸಂಹಿತೆ ಉಲ್ಲಂಘನೆ: ದೂರು

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2018, 11:48 IST
Last Updated 7 ಏಪ್ರಿಲ್ 2018, 11:48 IST

ವಿಜಯಪುರ: ‘ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ನೀತಿಸಂಹಿತೆ ಉಲ್ಲಂಘನೆಯಾಗುತ್ತಿದೆ. ಸ್ಥಳೀಯ ಅಧಿಕಾರಿಗಳು ಕಾನೂನು ಕ್ರಮಕ್ಕೆ ಮುಂದಾಗದಿರುವುದರಿಂದ ಚುನಾವಣಾ ಆಯೋಗಕ್ಕೆ ಇ ಮೇಲ್‌ ಮೂಲಕ ದೂರು ಸಲ್ಲಿಸಲಾಗಿದೆ’ ಎಂದು ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ತಿಳಿಸಿದರು.

‘ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಅಧಿಕಾರಿಗಳ ಮೇಲೆ ತಮ್ಮ ಪ್ರಭಾವ ಬೀರುತ್ತಿದ್ದಾರೆ. ಗುರುವಾರ ಬಿಎಲ್‌ಡಿಇ ಸಂಸ್ಥೆಯ ಆವರಣದಲ್ಲಿ ಮತದಾರರಿಗೆ ಆಮಿಷವೊಡ್ಡಿದ್ದಕ್ಕೆ ಸಂಬಂಧಿಸಿದಂತೆ ದೂರು ಸಲ್ಲಿಸಿದರೂ ಯಾವೊಬ್ಬ ಅಧಿಕಾರಿಯೂ ಇದುವರೆಗೆ ಕ್ರಮ ಜರುಗಿಸಿಲ್ಲ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಡೆಸುವಂತೆ ಆಗ್ರಹಿಸಿ ಶೀಘ್ರದಲ್ಲೇ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.