
ಪ್ರಜಾವಾಣಿ ವಾರ್ತೆಇಂಡಿ: ಬಸ್ಸಿನ ಸ್ಟೇರಿಂಗ್ ರಾಡ್ ಮುರಿದ ಪರಿಣಾಮ ಬಸ್ಸೊಂದು ಗಟಾರಗೆ ಉರುಳಿ ಬಿದ್ದು 25 ಜನರು ಗಾಯಗೊಂಡ ಘಟನೆ ಇಲ್ಲಿಯ ರೈಲ್ವೆ ನಿಲ್ದಾಣದ ಬಳಿ ಶುಕ್ರವಾರ ಮುಂಜಾನೆ 11 ಗಂಟೆ ಸುಮಾರಿಗೆ ಸಂಭವಿಸಿದೆ.
ಇಂಡಿ ಡಿಪೊಕ್ಕೆ ಸೇರಿದ ಈ ಬಸ್ ಸೊಲ್ಲಾಪುರದಿಂದ-ಸಿಂದಗಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಾಪುರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.
ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳೆ ಹೆಚ್ಚಾಗಿ ಪ್ರಯಾಣಿಸುತ್ತ್ದ್ದಿದರು ಎಂದು ತಿಳಿದು ಬಂದಿದೆ.
ಈ ಕುರಿತು ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಬಸ್ ಅಪಘಾತದ ಸುದ್ದಿ ತಿಳಿದ ತಕ್ಷಣವೇ ಅಂಬುಲೆನ್ಸ್ಗಳು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.