ADVERTISEMENT

ಬಿಜೆಪಿ ಅಧಿಕಾರ ಹಿಡಿಯುವುದು ನಿಶ್ಚಿತ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2017, 8:38 IST
Last Updated 7 ಡಿಸೆಂಬರ್ 2017, 8:38 IST

ಚಡಚಣ: ನವ ಕರ್ನಾಟಕ ನಿರ್ಮಾಣಕ್ಕಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಬಿಜೆಪಿ ಮುಖಂಡ ಗೋಪಾಲ ಕಾರಜೋಳ ಹೇಳಿದರು.

ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚಿ, ರಾಜ್ಯ ಸರ್ಕಾರದ ಕಾರ್ಯ ವೈಖರಿಗೆ ಬೇಸತ್ತ ಮತದಾರರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಹೀಗಾಗಿ ಈ ಬಾರಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ಮಂಗಳವಾರ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಡಿ.2 ರಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾದ ಪರಿವರ್ತನಾ ಯಾತ್ರೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿರುವುದು, ಬಿಜೆಪಿಗೆ ಸಿಗುತ್ತಿರುವ ಬೆಂಬಲಕ್ಕೆ ಸಾಕ್ಷಿ ಎಂದರು.

ADVERTISEMENT

ಜಿಲ್ಲಾ ಪಂಚಾಯ್ತಿ ಸದಸ್ಯ ಭೀಮಾಶಂಕರ ಬಿರಾದಾರ, ವಕೀಲ ಅಶೋಕ ಕುಲಕರ್ಣಿ, ಪ್ರಭಾಕರ ನಿರಾಳೆ, ಸಿದ್ದು ಗುಡ್ಡಾಪೂರ, ಚಂದು ವಾಳಿಖಿಂಡಿ, ಅಪ್ಪುಗೌಡ ಪಾಟೀಲ, ಜಕರಾಯ ಅಂಜುಟಗಿ, ಶಬ್ಬೀರ ಅತ್ತಾರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.