ADVERTISEMENT

ಮನೆ ಮನೆ ಬಿಜೆಪಿ ಪ್ರಚಾರ ಆರಂಭ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2018, 5:13 IST
Last Updated 29 ಮಾರ್ಚ್ 2018, 5:13 IST
ನಿಡಗುಂದಿ ಪಟ್ಟಣದಲ್ಲಿ ಬಿಜೆಪಿ ಪರವಾಗಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು
ನಿಡಗುಂದಿ ಪಟ್ಟಣದಲ್ಲಿ ಬಿಜೆಪಿ ಪರವಾಗಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು   

ನಿಡಗುಂದಿ: ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ನಾನಾ ಬಡಾವಣೆಗಳಲ್ಲಿ ಬುಧವಾರ ಮನೆ, ಮನೆಗೆ ಸಂಚರಿಸಿ ಪ್ರಚಾರ ಕೈಗೊಂಡರು.

ಪಟ್ಟಣದ ನೇಕಾರ ಓಣಿ, ಗೌರಿ ಗುಡಿ ಓಣಿ, ದ್ಯಾಮವ್ವನ ಗುಡಿ ಓಣಿ ಸೇರಿದಂತೆ ನಾನಾ ಕಡೆ ಪ್ರತಿ ಮನೆಗೂ ತೆರಳಿ ಬಿಜೆಪಿಯ ಕಾರ್ಯಸಾಧನೆಯ ಬಗ್ಗೆ ವಿವರಿಸಿದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಬಗ್ಗೆ ತಿಳಿಸಿದರು.

ADVERTISEMENT

‘ರಾಜ್ಯದಲ್ಲಿ ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರಲ್ಲಿ ಜಿಗುಪ್ಸೆ ಮೂಡಿದೆ, ಆ ಸರ್ಕಾರ ವನ್ನು ಕಿತ್ತೆಸೆಯಲು ಎಲ್ಲರೂ ತುದಿಗಾಲ ಮೇಲೆ ನಿಂತಿದ್ದಾರೆ’ ಎಂದರು.

ಮುಖಂಡರಾದ ಸಂಗನಗೌಡ ಚಿಕ್ಕೊಂಡ, ಶಿವಾನಂದ ಮುಚ್ಚಂಡಿ, ಚಂದ್ರಶೇಖರ ಹೊಲ್ದೂರ, ಶಂಕರ ರೇವಡಿ, ಸಂಗನಗೌಡ ಚಿಕ್ಕೊಂಡ, ಅಶೋಕ ಉಳ್ಳಿ, ಚಟ್ಟೇರ, ಶೇಖರ ದೊಡಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.