ಇಂಡಿ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಇಂಡಿ ವಿಧಾನಸಭಾ ಮತಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದರೆ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸುತ್ತೇನೆ’ ಎಂದು ಮಾಜಿ ಶಾಸಕ ರವಿಕಾಂತ ಪಾಟೀಲ ಹೇಳಿದ್ದಾರೆ.
ಇತ್ತೀಚಿಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಯಡಿಯೂರಪ್ಪ ಅವರ ಯಾವ ಕ್ಷೇತ್ರದಲ್ಲಿಯೇ ಚುನಾವಣೆಗೆ ನಿಂತರೂ ಗೆಲ್ಲಿಸಲು ಶ್ರಮಿಸುತ್ತೇನೆ’ ಎಂದರು. ಒಂದು ವೇಳೆ ಚುನಾ ವಣೆಯಲ್ಲಿ ನಿಮಗೆ ಟಿಕೆಟ್ ನೀಡದಿದ್ದರೆ ಎನ್ನುವ ಪ್ರಶ್ನೆಗೆ ‘ ನನಗೆ ಬಿಜೆಪಿ ಖಂಡಿತಾ ಟಿಕೆಟ್ ನೀಡುತ್ತದೆ. ಆ ವಿಶ್ವಾಸ ನನಗಿದೆ’ ಎಂದರು.
‘ಟಿಕೆಟ್ ಲಭಿಸದೇ ಇದ್ದರೆ ಪಕ್ಷೇತರನಾಗಿ ಸ್ಪರ್ಧಿಸುವದಿಲ್ಲ. ಪಕ್ಷದ ಹಿರಿಯ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ನಾಗಿದ್ದೇನೆ. ಜೊತೆಗೆ ಬಿಜೆಪಿಗೆ ಬೆಂಬಲಿಸುತ್ತೇನೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.