ADVERTISEMENT

‘ಭಾಷೆ, ನೆಲ, ಜಲ ಸಂರಕ್ಷಣೆಗೆ ಸನ್ನದ್ಧರಾಗಿ’

​ಪ್ರಜಾವಾಣಿ ವಾರ್ತೆ
Published 9 ಜನವರಿ 2014, 5:31 IST
Last Updated 9 ಜನವರಿ 2014, 5:31 IST

ಇಂಡಿ: ಕನ್ನಡ ಭಾಷೆ, ನೆಲ, ಜಲ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಮಾರ್ಗದರ್ಶನ ದಲ್ಲಿ ರಾಷ್ಟ್ರದ ಯುವ ಸಮೂಹ ಸನ್ನದ್ಧರಾಗಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲರ ಸಹೋದರ ಬಸವಂತರಾಯಗೌಡ ಪಾಟೀಲ ಕರೆ ನೀಡಿದರು.

ಅವರು ಇಂಡಿ ತಾಲ್ಲೂಕಿನ ಹಿರೇರೂಗಿ ಗ್ರಾಮದಲ್ಲಿ ಈಚೆಗೆ ಕರ್ನಾಟಕ ರಕ್ಷಣಾ ವೇದಿಕೆಯ 38ನೇ ಶಾಖೆ ಉದ್ಘಾಟಿಸಿ ಮಾತನಾಡಿದರು.
ವೇದಿಕೆಯ ಉತ್ತರ ಕರ್ನಾಟಕ ಉಪಾಧ್ಯಕ್ಷ ಸಂತೋಷ ಪಾಟೀಲ ಮಾತನಾಡಿ, ಬೇಳಗಾವಿಯ ಎಂಇಎಸ್‌ ಶಾಸಕ ಸಂಭಾಜಿರಾವ ಪಾಟೀಲರು ಕರ್ನಾಟಕ ಸರ್ಕಾರದ ಶವಯಾತ್ರೆ ಮಾಡುತ್ತೇವೆ ಎಂದು ಗಡಿ ಸಮಸ್ಯೆ ನೆಪ ಮಾಡಿಕೊಂಡು ಮಿತಿಮೀರಿದ ಉದ್ಧ ಟತನದ ಹೇಳಿಕೆಗಳನ್ನು ನೀಡಿ ಕನ್ನಡದ ನೆಲ, ಜಲ ಕಬಳಿಸುವ ಹುನ್ನಾರಕ್ಕೆ ಕೈಯಿ ಡುತ್ತಿದ್ದಾರೆ. ಈ ಪ್ರವೃತ್ತಿ ಖಂಡನೀಯ ಎಂದ ಅವರು ಹಾವಿನ ಬುಟ್ಟಿಗೆ ಕೈಹಾಕಿದಂತಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಿಶೇಷ ಉಪನ್ಯಾಸಕರಾಗಿ ಆಗಮಿ ಸಿದ ಸಾಹಿತಿ ದಾನಪ್ಪ ಬಗಲಿ ವಿಶೇಷ ಉಪನ್ಯಾಸ ನೀಡಿದರು. ತಡವಲಗಾ ಗ್ರಾಮದ ಅಭಿನವ ರಾಚೋಟೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ವೇದಿಕೆ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರೇಷ್ಮಾ ಪಡೇಕನೂರ, ಬಿ.ಡಿ. ಪಾಟೀಲ, ಮಲ್ಲಿಕಾರ್ಜುನ ಗಿಣ್ಣಿ, ಡಾ, ಮಲ್ಲಿಕಾರ್ಜುನ ಕಲ್ಲೂರ, ಜಟ್ಟು ಮರಡಿ, ಸೈಬಣ್ಣ ಕೋಟೆಣ್ಣವರ, ಮಹೇಶ ಕುಂಬಾರ, ಶ್ರೀಶೈಲ ಗುನ್ನಾ ಪುರ, ರಾಜು ಅಂಜುಟಗಿ, ಸಿದ್ದು ಡಂಗಾ, ಮಹೇಶ ಹೂಗಾರ, ಬಾಳು ಮುಳಜಿ, ಅನಿಲಗೌಡ ಭೀಮ, ರೇವಪ್ಪ, ಶಿವು ಮುಂತಾದವರು ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.