ADVERTISEMENT

₹ 5 ಲಕ್ಷ ಮೌಲ್ಯದ ಅಫೀಮು ವಶ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2018, 6:40 IST
Last Updated 30 ಮಾರ್ಚ್ 2018, 6:40 IST

ಧೂಳಖೇಡ: ಲಾರಿಯಲ್ಲಿ ಅಫೀಮು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು, ₹ 5 ಲಕ್ಷ ಮೌಲ್ಯದ 30 ಕೆ.ಜಿ. ಅಫೀಮನ್ನು ಗ್ರಾಮದ ಬಳಿ ಗುರುವಾರ ವಶಪಡಿಸಿಕೊಂಡಿದ್ದಾರೆ.

ಹರಿಯಾಣದ ಲಾರಿ ಚಾಲಕ ಗಣೇಶ್‌ (32)ನನ್ನು ಅಫೀಮು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಅಬಕಾರಿ ಉಪ ಆಯುಕ್ತ ವೆಂಕಟೇಶ ಪದಕಿ ತಿಳಿಸಿದ್ದಾರೆ.

ಹರಿಯಾಣದಿಂದ ರಾಜ್ಯ ಪ್ರವೇಶಿಸಿದ ಲಾರಿಯನ್ನು ಅಬಕಾರಿ ಪೊಲೀಸರು ಚಡಚಣ ತಾಲ್ಲೂಕಿನ ಧೂಳಖೇಡ ಗ್ರಾಮದ ಬಳಿಯಿರುವ ಹಳೆಯ ಸೇಲ್ಸ್‌ ಟ್ಯಾಕ್ಸ್‌ ಕಚೇರಿ ಮುಂಭಾಗ ವಶಕ್ಕೆ ಪಡೆದು, ಪರಿಶೀಲನೆ ನಡೆಸಿದಾಗ ಅಫೀಮು ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.