ವಿಜಯಪುರ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಕೋಟಾ ತಾಲ್ಲೂಕಿನ ತೊರವಿ ತಾಂಡಾ 1 ರ ತೋಟದಲ್ಲಿ ಬುಧವಾರ ನಡೆದಿದೆ.
ಅನಿತಾ ಪಿಂಟು ಜಾಧವ್ (27) ಎಂಬ ಮಹಿಳೆ ತನ್ನ ಮಕ್ಕಳಾದಪ್ರವೀಣ (6) ಸುದೀಪ (4) ಮಮದಿಕಾ (2) ಎಂಬ ಮೂರು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.