ADVERTISEMENT

ವಿಜಯಪುರ: ಕೆಪಿಟಿಸಿಎಲ್ ಎಇಇ ಸಿದ್ಧರಾಮ ಬಿರಾದಾರ ಮನೆ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 5:31 IST
Last Updated 15 ಜುಲೈ 2021, 5:31 IST
   

ವಿಜಯಪುರ: ನಗರದ ಸುಕೂನ್ ಲೇಔಟ್ ನಲ್ಲಿರುವ ಕೆಪಿಟಿಸಿಎಲ್ ಎಇಇ ಸಿದ್ದರಾಮ ಬಿರಾದಾರ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಿದ್ದರಾಮ ಬಿರಾದಾರ ಅವರ ಅಳಿಯ ಅರ್ಜುನ್ ಬಿರಾದಾರ ನಿವಾಸದ ಮೇಲೂ ದಾಳಿ ನಡೆಸಿದ ಎಸಿಬಿ ತಂಡ ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.

ಎಇಇ ಸಿದ್ದರಾಮಗೆ ಸೇರಿದ ವಿಜಯಪುರ ತಾಲ್ಲೂಕಿನ ಲೋಣಿ ಬಿ. ಕೆ ಗ್ರಾಮದಲ್ಲಿನ‌ ನಿವಾಸದ ಮೇಲೆ ಹಾಗೂ ತೋಟದ ಮನೆ‌ ಮೇಲೂ ದಾಳಿ ನಡೆಸಿ, ಪರಿಶೀಲನೆ ನಡಸಿದ್ದಾರೆ.
ವಿಜಯಪುರ ನಗರದ ಕೆಪಿಟಿಸಿಎಲ್ ಕಚೇರಿಯಲ್ಲೂ ಎಸಿಬಿ ತಂಡ ಪರಿಶೀಲನೆ ನಡೆಸಿದೆ.

ADVERTISEMENT

ಎಸಿಬಿ ಡಿಎಸ್ ಪಿ ಮಂಜುನಾಥ ಗಂಗಲ್ ನೇತೃತ್ವದಲ್ಲಿ ವಿಜಯಪುರ, ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆ ಎಸಿಬಿ‌ ಇನ್ಸ್‌ಪೆಕ್ಟರ್ ದಾಳಿಯಲ್ಲಿ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.