ವಿಜಯಪುರ: ತಾಲ್ಲೂಕಿನ ಕವಲಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸೋಮವಾರ ಅಪರಿಚಿತ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕವಲಗಿ ಗ್ರಾಮದ ದುಂಡಪ್ಪ ಭೈರವಾಡಗಿ (35) ಮೃತಪಟ್ಟವರು. ಸ್ಥಳಕ್ಕೆ ಭೇಟಿ ನೀಡಿದ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.
ವಿದ್ಯುತ್ ಘಟಕದಲ್ಲಿ ಆಕಸ್ಮಿಕ ಬೆಂಕಿ
ಬಸವನಬಾಗೇವಾಡಿ ತಾಲ್ಲೂಕು ಮಸಬಿನಾಳ ಬಳಿಯ ಮುಳವಾಡ ಏತ ನೀರಾವರಿ ಯೋಜನೆಯ ಮುಖ್ಯ ಕಾಲುವೆಯ ಜಾಕ್ವೆಲ್ನ ವಿದ್ಯುತ್ ಘಟಕದಲ್ಲಿ ಸೋಮವಾರ ಆಕಸ್ಮಿಕ ಬೆಂಕಿ ತಗುಲಿದೆ.
ವಿದ್ಯುತ್ ಟ್ರಾನ್ಸ್ಫಾರ್ಮ್ರಗಳಿಗೆ ಬೆಂಕಿ ವ್ಯಾಪಿಸಿದ್ದು, ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಸಿಬ್ಬಂದಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.