ADVERTISEMENT

ಕಾರು ಅಪಘಾತ: ಇಬ್ಬರಿಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 16:45 IST
Last Updated 17 ಡಿಸೆಂಬರ್ 2020, 16:45 IST

ಕೊಲ್ಹಾರ: ಕಾರು ರಸ್ತೆ ಪಕ್ಕದ ಸೇತುವೆ ಗೋಡೆಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿ ಸೇರಿ ಇಬ್ಬರು ಗಾಯಗೊಂಡ ಘಟನೆ ತಾಲ್ಲೂಕಿನ ಕೂಡಗಿ ತಾಂಡಾ ಬಳಿ ಬುಧವಾರ ಸಂಭವಿಸಿದೆ.

ತಾಲ್ಲೂಕಿನ ತಳೇವಾಡ ಗ್ರಾ.ಪಂ 4ನೇ ವಾರ್ಡಿನಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿ ಸಿದಪ್ಪ ಬಮರಡ್ಡಿ ಹಾಗೂ ಬಾಬು ಬೆಲ್ಲದ ಗಾಯಗೊಂಡವರು. ಇಬ್ಬರು ಬುಧವಾರ ಮಧ್ಯಾಹ್ನ ತಳೇವಾಡ ಸಮೀಪದ ಕೂಡಗಿ ತಾಂಡಾ ಬಳಿ ಕಾರಿನಲ್ಲಿ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT