ವಿಜಯಪುರ: ಜಿಲ್ಲೆಯ ವಿವಿಧೆಡೆ ಮಂಗಳವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಸಾಧಾರಣ ಮಳೆಯಾಗಿದೆ. ಬಿಸಿಲಿನಿಂದ ಬಳಲಿದ ಜನತೆಗೆ ಮಳೆ ತಂಪೆರೆದಿದೆ.
ಬಸವನ ಬಾಗೇವಾಡಿ, ತಾಳಿಕೋಟೆ, ಮುದ್ದೇಬಿಹಾಳ, ನಾಲತವಾಡ ವ್ಯಾಪ್ತಿಯಲ್ಲಿ ಜಿಟಿಜಿಟಿ ಮಳೆಯಾಗಿದೆ. ಕಲಕೇರಿ ವ್ಯಾಪ್ತಿಯಲ್ಲಿ ಕೆಲಹೊತ್ತು ಆಲಿಕಲ್ಲು ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.