ADVERTISEMENT

ಆಲಮಟ್ಟಿ | ಕಾಲುವೆಯಲ್ಲಿ ಕಾಲು ಜಾರಿ ಬಿದ್ದ ಬಾಲಕ ನಾಪತ್ತೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2025, 6:29 IST
Last Updated 21 ಅಕ್ಟೋಬರ್ 2025, 6:29 IST
ರವಿ ಜಗ್ಗಲ
ರವಿ ಜಗ್ಗಲ   

ಆಲಮಟ್ಟಿ: ಇಲ್ಲಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ (ಪಾರ್ವತಿ ಕಟ್ಟಾ ಸೇತುವೆ ಸಮೀಪ)ಯಲ್ಲಿ ಹಾಸಿಗೆ ತೊಳೆಯಲು ಹೋಗಿ ಕಾಲು ಜಾರಿ ಕಾಲುವೆಯಲ್ಲಿ ಬಿದ್ದ ಬಾಲಕ ನಾಪತ್ತೆಯಾದ ಘಟನೆ ಸೋಮವಾರ ನಡೆದಿದೆ.

ಬಾಲಕ ಬಾಗಲಕೋಟೆ ತಾಲ್ಲೂಕಿನ ನಾಯನೇಗಲಿ ಗ್ರಾಮದ ರವಿ ಮಂಜುನಾಥ ಜಗ್ಗಲ (16). ಬಾಲಕ ಇಲ್ಲಿಯ ಆರ್ ಬಿಪಿಜಿ ಹಳಕಟ್ಟಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ ಎಂದು ತಿಳಿದು ಬಂದಿದೆ. 

ಬಸವನಬಾಗೇವಾಡಿ ಹಾಗೂ‌ ಮುದ್ದೇಬಿಹಾಳದಿಂದ ಅಗ್ನಿಶಾಮಕ ದಳದವರು ಸ್ಥಳೀಯ ಮೀನುಗಾರರು ಕಾಲುವೆಯಲ್ಲಿ ನಾಪತ್ತೆಯಾದ ಬಾಲಕನಿಗಾಗಿ ಹುಡುಕಾಟ ನಡೆಸಿದರು.‌ ಸಂಜೆಯಾದರೂ ಪತ್ತೆಯಾಗಲಿಲ್ಲ.
ಘಟನಾ ಸ್ಥಳಕ್ಕೆ ನಿಡಗುಂದಿ ಸಿಪಿಐ ಶರಣಗೌಡ ಗೌಡರ, ಪಿಎಸ್ ಐ ಶಿವಾನಂದ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT
ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಕಾಲುಜಾರಿ ಬಿದ್ದ ಬಾಲಕ ರವಿಯ ಹುಡುಕಾಟದಲ್ಲಿ ತೊಡಗಿರುವ ಅಗ್ನಿಶಾಮಕ ದಳದ ತಂಡದವರು
ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಕಾಲುಜಾರಿ ಬಿದ್ದ ಬಾಲಕ ರವಿಯ ಹುಡುಕಾಟದಲ್ಲಿ ತೊಡಗಿರುವ ಅಗ್ನಿಶಾಮಕ ದಳದ ತಂಡದವರು
ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಕಾಲುಜಾರಿ ಬಿದ್ದ ಬಾಲಕ ರವಿಯ ಹುಡುಕಾಟದಲ್ಲಿ ತೊಡಗಿರುವ ಅಗ್ನಿಶಾಮಕ ದಳದ ತಂಡದವರು