ADVERTISEMENT

ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಅಂಬುಲೆನ್ಸ್‌: ಗರ್ಭಿಣಿ ಸಾವು

ತಾಳಿಕೋಟೆ ಪಟ್ಟಣದಿಂದ ವಿಜಯಪುರ ಜಿಲ್ಲಾಸ್ಪತ್ರೆಗೆ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದಾಗ ಘಟನೆ: ಮಗುವೂ ಸಾವು

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2023, 11:03 IST
Last Updated 9 ಡಿಸೆಂಬರ್ 2023, 11:03 IST
<div class="paragraphs"><p>ಭಾಗ್ಯಶ್ರೀ ರಾವುತಪ್ಪ ಪಾರಣ್ಣನವರ ತಮ್ಮ ಪತಿಯೊಂದಿಗೆ ಇರುವ ಫೋಟೊ</p></div>

ಭಾಗ್ಯಶ್ರೀ ರಾವುತಪ್ಪ ಪಾರಣ್ಣನವರ ತಮ್ಮ ಪತಿಯೊಂದಿಗೆ ಇರುವ ಫೋಟೊ

   

ವಿಜಯಪುರ: ತಾಳಿಕೋಟೆ ಪಟ್ಟಣದಿಂದ ವಿಜಯಪುರ ಜಿಲ್ಲಾಸ್ಪತ್ರೆಗೆ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ‘108‘ ಅಂಬುಲೆನ್ಸ್ ಬಸವನ ಬಾಗೇವಾಡಿ ತಾಲ್ಲೂಕಿನ ಹೂವಿನಹಿಪ್ಪರಗಿ ಪಟ್ಟಣದಲ್ಲಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಮೃತಪಟ್ಟು, ಮಗುವೂ ಹೊಟ್ಟೆಯಲ್ಲೇ ಮರಣ ಹೊಂದಿದೆ.

ಭಾಗ್ಯಶ್ರೀ ರಾವುತಪ್ಪ ಪಾರಣ್ಣನವರ (19) ಮೃತ ಗರ್ಭಿಣಿ. ಒಂದೂವರೆ ವರ್ಷದ ಹಿಂದೆ ತಾಳಿಕೋಟೆ ತಾಲ್ಲೂಕಿನ ನಾವದಗಿ ಗ್ರಾಮದ ಭಾಗ್ಯಶ್ರೀ ಅವರ ವಿವಾಹವು ರಾವುತಪ್ಪ ಜೊತೆಗೆ ಆಗಿತ್ತು.

ADVERTISEMENT

ಭಾಗ್ಯಶ್ರೀಗೆ ಶನಿವಾರ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ತವರು ಮನೆ ನಾವದಗಿಯಿಂದ ತಾಳಿಕೋಟೆ ಸಮುದಾಯ ಆಸ್ಪತ್ರೆಗೆ ಅವರನ್ನು ಕರೆತರಲಾಗಿತ್ತು. ಭಾಗ್ಯಶ್ರೀ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ವೈದ್ಯರು ಸಲಹೆ ನೀಡಿದ ಹಿನ್ನೆಲೆಯಲ್ಲಿ ಅಂಬ್ಯುಲೆನ್ಸ್ ಕರೆದೊಯ್ಯವಾಗ  ಅಪಘಾತವಾಗಿ‌ದೆ.

ಗರ್ಭೀಣಿ ಸಾವಿಗೀಡಾದ ಹಿನ್ನೆಲೆಯಲ್ಲಿ ಪೋಷಕರು ತಾಳಿಕೋಟೆ ಸಮುದಾಯ ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದರು. ಜಿಲ್ಲಾಸ್ಪತ್ರೆಗೆ ಗರ್ಭಿಣಿಯನ್ನು ಕಳುಹಿಸಿದ್ದಕ್ಕೆ ಅಸಮಾದಾನ ವ್ಯಕ್ತಪಡಿಸಿದರು. ಉದ್ರಿಕ್ತರು ವೈದ್ಯಾಧಿಕಾರಿ ಮೇಲೆ ಹಲ್ಲೆಗೆ ಯತ್ನ ನಡೆಸಿದರು.

ಅಂಬುಲೆನ್ಸ್ ನಲ್ಲಿದ್ದ ಇಬ್ಬರು ಸ್ಟಾಫ್‌ ನರ್ಸ್, ಒಬ್ಬ ಸಹಾಯಕನಿಗೆ ಅಪಘಾತದಲ್ಲಿ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.