ADVERTISEMENT

ತಾಳಿಕೋಟೆ ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಆಗ್ರಹಿಸಿ ಶಾಸಕರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 5:18 IST
Last Updated 13 ಫೆಬ್ರುವರಿ 2026, 5:18 IST
 ತಾಳಿಕೋಟೆ: ಪಟ್ಟಣದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಆಯ್ಕೆ ಮಾಡಿದ  ಸ್ಥಳ ಪಟ್ಟಣದಿಂದ 4 ಕೀ ಮೀ ದೂರ ಇದ್ದು  ಅದನ್ನು ರದ್ದುಗೊಳಿಸಿ ಪಟ್ಟಣದಲ್ಲಿಯೇ ಸ್ಥಳ ಆಯ್ಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಬೇಕೆಂದು ತಾಲ್ಲೂಕು  ಹೋರಾಟ ಸಮಿತಿ ಪದಾಧಿಕಾರಿಗಳು ದೇವರ ಹಿಪ್ಪರಗಿ ಶಾಸಕ  ಭೀಮನಗೌಡ (ರಾಜುಗೌಡ) ಪಾಟೀಲರಿಗೆ  ಗುರುವಾರ ಮನವಿ ಸಲ್ಲಿಸಿದರು.
 ತಾಳಿಕೋಟೆ: ಪಟ್ಟಣದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಆಯ್ಕೆ ಮಾಡಿದ  ಸ್ಥಳ ಪಟ್ಟಣದಿಂದ 4 ಕೀ ಮೀ ದೂರ ಇದ್ದು  ಅದನ್ನು ರದ್ದುಗೊಳಿಸಿ ಪಟ್ಟಣದಲ್ಲಿಯೇ ಸ್ಥಳ ಆಯ್ಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಬೇಕೆಂದು ತಾಲ್ಲೂಕು  ಹೋರಾಟ ಸಮಿತಿ ಪದಾಧಿಕಾರಿಗಳು ದೇವರ ಹಿಪ್ಪರಗಿ ಶಾಸಕ  ಭೀಮನಗೌಡ (ರಾಜುಗೌಡ) ಪಾಟೀಲರಿಗೆ  ಗುರುವಾರ ಮನವಿ ಸಲ್ಲಿಸಿದರು.   

ತಾಳಿಕೋಟೆ: ಪಟ್ಟಣದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಆಯ್ಕೆ ಮಾಡಿದ ಸ್ಥಳ ಪಟ್ಟಣದಿಂದ 4 ಕಿ.ಮೀ ದೂರ ಇದ್ದು ಅದನ್ನು ರದ್ದುಗೊಳಿಸಿ ಪಟ್ಟಣದಲ್ಲಿಯೇ ಸ್ಥಳ ಆಯ್ಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಬೇಕೆಂದು ತಾಲ್ಲೂಕು ಹೋರಾಟ ಸಮಿತಿ ಪದಾಧಿಕಾರಿಗಳು ದೇವರ ಹಿಪ್ಪರಗಿ ಶಾಸಕ ಭೀಮನಗೌಡ (ರಾಜುಗೌಡ) ಪಾಟೀಲರಿಗೆ ಗುರುವಾರ ಮನವಿ ಸಲ್ಲಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ ರಾಜುಗೌಡ ಪಾಟೀಲರಿಗೆ ಭೇಟಿ ಮಾಡಿದ ತಾಲ್ಲೂಕು ಹೋರಾಟ ಸಮಿತಿಯ ಪದಾಧಿಕಾರಿಗಳು ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಆಯ್ಕೆ ಮಾಡಿದ ಸ್ಥಳ ಬಹಳ ದೂರದಲ್ಲಿರುವುದರಿಂದ ಸಾರ್ವಜನಿಕರಿಗೆ, ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ, ಮಹಿಳೆಯರಿಗೆ ಆಗುವ ತೊಂದರೆಯನ್ನು ವಿವರಿಸಿದರು.  ಪಟ್ಟಣದಲ್ಲಿ ಸರ್ಕಾರಿ ಸ್ಥಳಗಳು ಲಭ್ಯವಿದ್ದು ಅವುಗಳನ್ನು ಆಯ್ಕೆ ಮಾಡಲು ಇರುವ ಅವಕಾಶಗಳ ಕುರಿತು ಶಾಸಕರೊಂದಿಗೆ ಚರ್ಚಿಸಿ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಶಾಸಕರು ‘ವಿಷಯದ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ನನ್ನ ಮತಕ್ಷೇತ್ರದ ಹೆಚ್ಚಿನ ಹಳ್ಳಿಗಳು ತಾಳಿಕೋಟೆ ತಾಲ್ಲೂಕಿಗೆ ಒಳಪಡುವುದರಿಂದ ಸ್ಥಳೀಯ ಶಾಸಕರಿಗೂ ಹಾಗೂ ಸಂಬಂಧ ಪಟ್ಟ ಸಚಿವರಿಗೂ ಭೇಟಿಯಾಗಿ ಪಟ್ಟಣದಲ್ಲಿಯೇ ನಿರ್ಮಾಣ ಮಾಡಿ ಎಂದು ವಿನಂತಿಸುತ್ತೇನೆ’ ಎಂದು ತಿಳಿಸಿದರು.

ADVERTISEMENT

ಜೆಡಿಎಸ್ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ತಾಲ್ಲೂಕು ಜೆಡಿಎಸ್ ಯುವ ಮುಖಂಡ ಮಡು ಸಾಹುಕಾರ್ ಹೋರಾಟ ಸಮಿತಿಯ ಪದಾಧಿಕಾರಿಗಳಾದ , ಮುತ್ತಪ್ಪ ಚಮಲಾಪೂರ, , ವಿಜಯಸಿಂಗ್ ಹಜೇರಿ, ಪರಶುರಾಮ ತಂಗಡಗಿ ಮಯೂರ ಪಾಟೀಲ, ತಿಪ್ಪಣ್ಣ ಸಜ್ಜನ, ಅಮಿತಸಿಂಗ್ ಮನಗೂಳಿ, ಜೈಭೀಮ ಮುತ್ತಗಿ, ನಾಗೇಶ್ ಕಟ್ಟಿಮನಿ, ರವಿ ಕಟ್ಟಿಮನಿ, ರಾಗು ಮಾನೆ , ಸಿರಸಕುಮಾರ ಹಜೇರಿ, ಮುದುಕಪ್ಪ ಬಡಿಗೇರ, ಶರಣು ಗೊಟಖಂಡಕಿ, ನಿತಿನ್ ಜುಮ್ಮಣ್ಣ ನಾಲತವಾಡ, ವಿಠ್ಠಲ್ ಹಜೇರಿ, ಮಹಾಂತೇಶ ಕಟ್ಟಿಮನಿ, ರಾಜು ಹಜೇರಿ, ನಾರಾಯಣ ಹಿಂಗಮೋರೆ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.