ADVERTISEMENT

ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ: ವಿಜಯಪುರ ಪ್ರಶಸ್ತಿ ಗರಿ

ಗೃಹ ಸಚಿವರಿಂದ ಪ್ರಶಸ್ತಿ ಸ್ವೀಕರಿಸಿದ ವಿನಯಕುಮಾರ ಪಾಟೀಲ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 5:12 IST
Last Updated 8 ಡಿಸೆಂಬರ್ 2025, 5:12 IST
ಬೆಂಗಳೂರಿನ ರಾಜಭವನದಲ್ಲಿ ಭಾನುವಾರ ನಡೆದ ಸಶಸ್ತ್ರ ಪಡೆಗಳ ದ್ವಜ ದಿನಾಚರಣೆಯಲ್ಲಿ ವಿಜಯಪುರ  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ವಿನಯಕುಮಾರ ಪಾಟೀಲ ಅವರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ  ಪ್ರಶಸ್ತಿ ನೀಡಿದರು 
ಬೆಂಗಳೂರಿನ ರಾಜಭವನದಲ್ಲಿ ಭಾನುವಾರ ನಡೆದ ಸಶಸ್ತ್ರ ಪಡೆಗಳ ದ್ವಜ ದಿನಾಚರಣೆಯಲ್ಲಿ ವಿಜಯಪುರ  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ವಿನಯಕುಮಾರ ಪಾಟೀಲ ಅವರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ  ಪ್ರಶಸ್ತಿ ನೀಡಿದರು    

ವಿಜಯಪುರ: 2025ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ ಮಾಡಿದ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯು ಪ್ರಶಸ್ತಿಗೆ ಭಾಜನವಾಗಿದೆ.

ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ವಿನಯಕುಮಾರ ಪಾಟೀಲ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆ ಪ್ರಶಸ್ತಿಗೆ ಭಾಜನವಾಗಿತ್ತು. ಕಾರ್ಯಕ್ರಮದಲ್ಲಿ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ವಿ.ಶರತ್‍ಚಂದ್ರ, ಏರ್ ವೈಸ್ ಮಾರ್ಷಲ್‌ ಕೆ.ಎನ್. ಸಂತೋಷ (ವಿಎಸ್‍ಎಂ ನಿವೃತ್ತ), ಸೈನಿಕ ಕಲ್ಯಾಣ ಮತ್ತು ಪುನರವಸತಿ ಇಲಾಖೆ ನಿರ್ದೇಶಕ ಫ್ಲೈಟ್ ಲೆಫ್ಟಿನಂಟ್ ಎಂ.ಎಸ್.ಲೋಕಾಕ್ಷ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.