ADVERTISEMENT

ಅನರ್ಹರಿಗೆ ಪ್ರಶಸ್ತಿ: ಡಿಸಿಗೆ ದೂರು

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2020, 15:33 IST
Last Updated 2 ಡಿಸೆಂಬರ್ 2020, 15:33 IST
ವಿಜಯಪುರ ಹಲಸಂಗಿ ಗೆಳೆಯರ ಪ್ರತಿಷ್ಠಾನದಿಂದ ಅನರ್ಹರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಲಾಯಿತು
ವಿಜಯಪುರ ಹಲಸಂಗಿ ಗೆಳೆಯರ ಪ್ರತಿಷ್ಠಾನದಿಂದ ಅನರ್ಹರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಲಾಯಿತು   

ವಿಜಯಪುರ: ಹಲಸಂಗಿ ಗೆಳೆಯರ ಪ್ರತಿಷ್ಠಾನದಿಂದ 2019 ಮತ್ತು 2020ನೇ ಸಾಲಿನ ಪ್ರಶಸ್ತಿ ಆಯ್ಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಹಾಗೂ ಅನರ್ಹರಿಗೆ ಪ್ರಶಸ್ತಿ ನೀಡಲಾಗದೆ ಎಂದು ಆರೋಪಿಸಿ ಸಾಹಿತಿಗಳು, ಲೇಖಕರು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಪ್ರಶಸ್ತಿಗೆ ಆಯ್ಕೆಯಾಗಿರುವ ಕೆಲವರ ಮೇಲೆ ಕೃತಿ ಚೌರ್ಯದ ಆರೋಪ ಇದೆ. ಹೀಗಾಗಿ ಪ್ರಶಸ್ತಿ ನೀಡುವ ಮೊದಲು ಈ ಬಗ್ಗೆ ಕೂಲಂಕಷವಾಗಿ ವಿಮರ್ಶಿಸಬೇಕು ಎಂದು ಮನವಿ ಮಾಡಿದರು.

ಪ್ರಶಸ್ತಿ ಆಯ್ಕೆ ಸಮಿತಿಯು ಜಿಲ್ಲಾಧಿಕಾರಿಗಳಸಮ್ಮುಖದಲ್ಲಿ ವಿಜಯಪುರ ಜಿಲ್ಲೆಯಲ್ಲಿ ಸಭೆ ನಡೆಸದೇ ಧಾರವಾಡದಲ್ಲಿ ಸಾಹಿತಿಯೊಬ್ಬರ ಮನೆಯಲ್ಲಿ ಸಭೆ ನಡೆಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಅಲ್ಲದೇ, ಆಯ್ಕೆ ಸಮಿತಿಯಲ್ಲಿರುವ ಸದಸ್ಯರ ಅವಧಿ ಮುಗಿದಿದ್ದರೂ ಅವರನ್ನೇ ಮುಂದುವರಿಸಲಾಗಿದ್ದು, ತಕ್ಷಣ ಅವರನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರಶಸ್ತಿ ಆಯ್ಕೆ ಸಮಿತಿಗೆ ಸ್ಥಳೀಯರನ್ನು ನೇಮಕ ಮಾಡಬೇಕು, ಪ್ರಶಸ್ತಿ ನೀಡುವಾಗ ಸ್ಥಳೀಯರನ್ನು ಗುರುತಿಸಬೇಕು ಎಂದು ಕೋರಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಈ ಕುರಿತು ಪರಿಶೀಲನೆ ನಡೆಸಿ, ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಾಹಿತಿಗಳಾದ ಸಿದ್ದರಾಮ ಉಪ್ಪಿನ, ಎಸ್‌.ಆರ್‌.‍ಪಾಟೀಲ, ರಾಜಶೇಖರ ಭೋವಿ, ಸಂತೋಷ ಚನ್ನಬಸಪ್ಪ ಹತ್ತಿ, ಡಾ.ಆರ್‌.ಎಸ್‌.ಕತ್ತಿ, ಎಂ.ಐ.ಪತ್ತಾರ, ರಾಜೇಂದ್ರಕುಮಾರ್‌ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.