ADVERTISEMENT

ಸಿಎಂ ವಿರುದ್ಧ ಫೇಸ್‌ಬುಕ್‌ನಲ್ಲಿ ಮತ್ತೆ ಹರಿಹಾಯ್ದ ಯತ್ನಾಳ್ ಬೆಂಬಲಿಗರು

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 10:14 IST
Last Updated 21 ಅಕ್ಟೋಬರ್ 2020, 10:14 IST
ಶಾಸಕ ಬಸನಗೌಡ ಪಾಟೀಲ ಯತ್ನಾಳ
ಶಾಸಕ ಬಸನಗೌಡ ಪಾಟೀಲ ಯತ್ನಾಳ   
""
""

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಫೇಸ್‌ಬುಕ್‌ನಲ್ಲಿ ಮತ್ತೆ ಹರಿಹಾಯ್ದಿದ್ದಾರೆ.

'ಅಪ್ಪನ ಹೆಸರಿಂದ ರಾಜ್ಯಭಾರ ಮಾಡುವವರೇ ಉತ್ತರ ಕರ್ನಾಟಕದವರ ಬಗ್ಗೆ ಹಗುರವಾಗಿ ಮಾತನಾಡಿದರೆ ಜನರು ಕ್ಷಮಿಸುವುದಿಲ್ಲ. ಎಚ್ಚರ' ಎಂದು ತಮ್ಮ ಬೆಂಬಲಿಗ ರಾಘವ ಅಣ್ಣಿಗೇರಿ ಎಂಬುವವರು ಮಾಡಿರುವ ಪೋಸ್ಟ್‌ ಅನ್ನು ಶೇರ್ ಮಾಡಿಕೊಂಡಿದ್ದಾರೆ.

'ವಿಜಯೇಂದ್ರ ಒಬ್ಬನೇ ಉಪ ಚುನಾವಣೆ ಗೆಲ್ಲುವುದಾದರೆ, ನರೇಂದ್ರ ಮೋದಿ, ಅಮಿತ್ ಶಾ, ನಳಿನ್ ಕುಮಾರ್ ಕಟೀಲ್ ಹಾಗೂ ರಾಷ್ಟ್ರೀಯ ಹಾಗೂ ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಾತ್ರವೇನು? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸುವಿರಾ? ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುತ್ತಿರುವವರ ನಿಷ್ಠಾವಂತ ಕಾರ್ಯಕರ್ತರ ಪಾಡೇನು? ಪುತ್ರ ವ್ಯಾಮೋಹದ ಹೇಳಿಕೆ ಕೊಡುವುದನ್ನು ಬಿಟ್ಟು,ತಕ್ಷಣ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ನೆರವಾಗಿ ಎಂಬ ಬೆಂಬಲಿಗರ ಪೋಸ್ಟ್ ಅನ್ನು ಟ್ಯಾಗ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.