ADVERTISEMENT

ದೀಪಾವಳಿಗೆ ಪಟಾಕಿ ನಿಷೇಧಕ್ಕೆ ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2020, 6:58 IST
Last Updated 9 ನವೆಂಬರ್ 2020, 6:58 IST
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ   

ವಿಜಯಪುರ: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಲು ಮುಂದಾಗಿರುವುದಕ್ಕೆ ಆಡಳಿತ ಪಕ್ಷ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ ನಲ್ಲಿ ಪೋಸ್ಟ್ ಹಾಕಿರುವ ಯತ್ನಾಳ, ಹಿಂದೂಗಳು ದೀಪಾವಳಿ, ದಸರಾ, ಗಣೇಶ ಹಬ್ಬಗಳಂದು ಸಾಮೂಹಿಕವಾಗಿ ಸೇರುತ್ತಾರೆ. ಆಗೆಲ್ಲ ಶಬ್ಧ ರಹಿತ ದೀಪಾವಳಿ, ಪರಿಸರ ಸ್ನೇಹಿ ಗಣೇಶೋತ್ಸವ ಎಂದೆಲ್ಲ ಬೋಧನೆ ಮಾಡಲಾಗುತ್ತದೆ. ಇದೇ ರೀತಿ ರಕ್ತರಹಿತ ಬಕ್ರೀದ್, ನಿಶಬ್ಧ ಶುಕ್ರವಾರ, ಪಟಾಕಿ ಇಲ್ಲದ ಡಿಸೆಂಬರ್ 31 ರಾತ್ರಿ ಜಾರಿಗೆ ಬರಲಿ ಎಂದು ಆಗ್ರಹಿಸಿದ್ದಾರೆ.

ಧ್ವನಿವರ್ಧಕ ಬಳಸಿ ಕೂಗುವುದು, ರಸ್ತೆಯಲ್ಲಿ ನಮಾಜ್ ಮಾಡುವುದು ಬೇಡ ಎಂದು ಬರೆದುಕೊಂಡಿದ್ದಾರೆ. ನಾವು ಮನೆಯಲ್ಲೇ ದೀಪ ಹಚ್ಚುತ್ತೇವೆ. ಅವರು ಸ್ಪೀಕರ್ ಹಚ್ಚದೇ ನಮಾಜ್ ಮಾಡಲಿ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.