ADVERTISEMENT

ವಿಜಯಪುರ| ಬಿಹಾರ ಜಯಭೇರಿ: ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2025, 6:03 IST
Last Updated 15 ನವೆಂಬರ್ 2025, 6:03 IST
<div class="paragraphs"><p>ವಿಜಯಪುರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ವಿಜಯೋತ್ಸವ ಆಚರಿಸಿದರು&nbsp;</p></div>

ವಿಜಯಪುರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ವಿಜಯೋತ್ಸವ ಆಚರಿಸಿದರು 

   

ವಿಜಯಪುರ: ಬಿಹಾರನಲ್ಲಿ ಎನ್‍ಡಿಎ ಮೈತ್ರಿಕೂಟ ಭರ್ಜರಿ ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ವಿಜಯೋತ್ಸವ ಆಚರಿಸಿದರು.

ನಗರ ಗಾಂಧಿವೃತ್ತದಲ್ಲಿ ನೂರಾರು ಕಾರ್ಯಕರ್ತರು ಬಿಜೆಪಿ ಬಾವುಟ ಹಿಡಿದು, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನಿಸಿ ವಿಜಯೋತ್ಸವ ಆಚರಿಸಿದರು.

ADVERTISEMENT

ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಬಿಜೆಪಿಯ ಜನಪರ ನಿಲುವಿಗೆ ಬಿಹಾರ ಜನತೆ ಗೆಲುವಿನ ಉಡುಗೊರೆ ನೀಡಿದ್ದಾರೆ. ಬಿಹಾರ ಸರ್ವತೋಮುಖ ವಿಕಾಸವನ್ನು ಕೇಂದ್ರವಾಗಿರಿಸಿಕೊಂಡು ಚುನಾವಣೆ ಎದುರಿಸಿದ್ದ ಬಿಜೆಪಿಗೆ ಬಿಹಾರ ಜನತೆ ಮತ್ತೊಮ್ಮೆ ಆಶೀರ್ವದಿಸಿದ್ದಾರೆ, ವಿನಾಕಾರಣ ಕೇಂದ್ರ ಸರ್ಕಾರಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡಿರುವ ಕಾಂಗ್ರೆಸ್ ಮೊದಲಾದ ಪಕ್ಷಗಳಿಗೆ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಜನತೆ ಬಿಜೆಪಿಯೊಂದಿಗೆ ಇದ್ದಾರೆ ಎಂಬುದು ಇನ್ನೊಮ್ಮೆ ಸಾಬೀತಾಗಿದೆ. ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈ ಬಿಹಾರ ಚುನಾವಣೆಯೇ ದಿಕ್ಸೂಚಿ, ಇಲ್ಲಿಯೂ ಬಿಜೆಪಿ ಅತ್ಯಂತ ದಾಖಲೆಯೊಂದಿಗೆ ವಿಜಯ ಸಾಧಿಸಲಿದೆ. ಪ್ರಧಾನಿ ನರೇಂದ್ರ ಮೋದಿ, ಅಭಿವೃದ್ಧಿ ಉಸಿರಾಗಿಸಿಕೊಂಡಿರುವ ನಿತೀಶ್‌ ಕುಮಾರ್‌ ಅವರ ನಾಯಕತ್ವಕ್ಕೆ ಬಿಹಾರ ಜನತೆ ಮನ್ನಣೆ ನೀಡಿದ್ದಾರೆ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮುಖಂಡರಾದ ಚಂದ್ರಶೇಖರ ಕವಟಗಿ, ಭೀಮಾಶಂಕರ ಹದನೂರ, ಮಳುಗೌಡ ಪಾಟೀಲ, ಸಾಬು ಮಾಶ್ಯಾಳ, ಈರಣ್ಣ ರಾವೂರ, ಬಸವರಾಜ ಬೈಚಬಾಳ, ಕೃಷ್ಣ ಗುನ್ನಾಳಕರ, ಸಂಜೀವ ಐಹೊಳೆ, ಉಮೇಶ ಕೊಳಕೂರ, ಮಹೇಂದ್ರ ನಾಯಕ, ಸಂಜಯ್ ಪಾಟೀಲ್ ಕನಮಡಿ, ಚಿದಾನಂದ ಚಲವಾದಿ, ಸಂದೀಪ್ ಪಾಟೀಲ, ಶಿವರುದ್ರ ಬಾಗಲಕೋಟ, ಪಾಪುಸಿಂಗ್ ರಜಪೂತ, ಮಲ್ಲು ಕಲಾದಗಿ, ವಿಜಯ ಜೋಶಿ, ಚಿನ್ನು ಚಿನಗುಂಡಿ, ಕಾಂತು ಶಿಂಧೆ, ವಿನಾಯಕ್ ದಹಿಂಡೆ, ರಾಘವೇಂದ್ರ, ಅಶೋಕ ರಾಠೋಡ, ಶ್ರೀಧರ್ ಬಿಜ್ಜರಗಿ, ಗಿರೀಶ್ ಪಾಟೀಲ, ಆನಂದ್ ಮುಚ್ಚಂಡಿ, ಜಗದೀಶ್ ಮುಚ್ಚಂಡಿ, ಸಿದ್ದು ಮಲ್ಲಿಕಾರ್ಜುನ್ ಮಠ, ಸಂಗಮೇಶ್ ಹೌದೆ, ರಾಹುಲ್ ಜಾಧವ, ಅಪ್ಪು ಕುಂಬಾರ, ಬಸವರಾಜ ಹಳ್ಳಿ, ರಾಜಶೇಖರ್ ಬಾಗಲಕೋಟ, ಗೇಸುರಾಜ್ ಇನಾಮದಾರ, ಗಣೇಶ್ ರಣದೇವಿ, ಲಖನ್ ದೇವಳ್ಳಿ, ಭರತ್ ಕೋಳಿ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.