ADVERTISEMENT

ಜಲ್ಲಿ ಕಲ್ಲು ಕ್ರಷರ್‌ ಘಟಕದಲ್ಲಿ ಸ್ಫೋಟ: ಓರ್ವ ಸಾವು, ಇಬ್ಬರು ಗಂಭೀರ

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 13:27 IST
Last Updated 8 ಜುಲೈ 2021, 13:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಿಜಯಪುರ: ತಾಲ್ಲೂಕಿನ ಅಲಿಯಾಬಾದ್ ಸಮೀಪದ ಸಾವಳಗಿ ಜಲ್ಲಿ ಕಲ್ಲು ಕ್ರಷರ್ ಘಟಕದಲ್ಲಿ ಗುರುವಾರ ಸ್ಫೋಟ ಸಂಭವಿಸಿ ಒಬ್ಬ ಸಾವಿಗೀಡಾಗಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಜಲ್ಲಿ ಕಲ್ಲು ಕ್ರಷರ್‌ ಘಟಕದ ಸಮೀಪದ ರಸ್ತೆಯಲ್ಲಿ ನಿಂತಿದ್ದ ಮೋಹನ್ ನಾಯ್ಕ(45) ಎಂಬುವವರು ಸ್ಫೋಟದಿಂದ ಸಾವಿಗೀಡಾಗಿದ್ದಾರೆ. ಗಾಯಗೊಂಡಿರುವ ಗಿರೀಶ್ ಹಳ್ಳಿ ಹಾಗೂ ಸಚಿನ್ ಹಳ್ಳಿ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆಸ್ಪತ್ರೆ ಆವರಣದಲ್ಲಿ ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಸಾವಳಗಿ ಕ್ರಷರ್ ಘಟಕದಲ್ಲಿದ್ದವರು ಘಟನೆ ಬಳಿಕ ಪರಾರಿಯಾಗಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್‍ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.