ADVERTISEMENT

ಸೋಲಾಪುರ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಬಳಿ ಕಾರು ಅಪಘಾತ: ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 16 ಜನವರಿ 2022, 16:40 IST
Last Updated 16 ಜನವರಿ 2022, 16:40 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಸೋಲಾಪುರ: ಸೋಲಾಪುರ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ತೇರಾ ಮೈಲ್ ಹತ್ತಿರ ಸ್ಕಾರ್ಪಿಯೋ (ಎಂ.ಎಚ್‌ 13 ಝಡ್‌ 9909) ಕಾರು ಭಾನುವಾರ ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಇದ್ದ ಗಿಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಸೋಲಾಪುರ ನಗರದ ಕಿಶೋರ್ ಭೋಸ್ಲೆ(45), ನಿತಿನ್ ಭಾಂಗೆ(32), ವೆಂಕಟೇಶ್ ಮೇತ್ರೆ (45) ಸಾವಿಗಿಡಾಗಿದ್ದಾರೆ ಎಂದು ಗುರುತಿಸಲಾಗಿದೆ. ರಾಕೇಶ್ ಹುಚ್ಚೆ ಗಂಭೀರ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಔರಾದ್‌ನಿಂದ ಸೋಲಾಪುರಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT