ಸೋಲಾಪುರ: ಸೋಲಾಪುರ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ತೇರಾ ಮೈಲ್ ಹತ್ತಿರ ಸ್ಕಾರ್ಪಿಯೋ (ಎಂ.ಎಚ್ 13 ಝಡ್ 9909) ಕಾರು ಭಾನುವಾರ ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಇದ್ದ ಗಿಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಸೋಲಾಪುರ ನಗರದ ಕಿಶೋರ್ ಭೋಸ್ಲೆ(45), ನಿತಿನ್ ಭಾಂಗೆ(32), ವೆಂಕಟೇಶ್ ಮೇತ್ರೆ (45) ಸಾವಿಗಿಡಾಗಿದ್ದಾರೆ ಎಂದು ಗುರುತಿಸಲಾಗಿದೆ. ರಾಕೇಶ್ ಹುಚ್ಚೆ ಗಂಭೀರ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಔರಾದ್ನಿಂದ ಸೋಲಾಪುರಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.