ADVERTISEMENT

ಮುದ್ದೇಬಿಹಾಳ | ಮರಕ್ಕೆ ಕಾರು ಡಿಕ್ಕಿ: ಇಬ್ಬರ ಸಾವು 

​ಪ್ರಜಾವಾಣಿ ವಾರ್ತೆ
Published 5 ಮೇ 2024, 7:04 IST
Last Updated 5 ಮೇ 2024, 7:04 IST

ಮುದ್ದೇಬಿಹಾಳ: ತಾಲ್ಲೂಕಿನ ಢವಳಗಿ ಹಳ್ಳದ ಸಮೀಪದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.

ಕಾರು ಚಲಾಯಿಸುತ್ತಿದ್ದ ಮಸಬಿನಾಳದ ದೊಡ್ಡಯ್ಯ ರಾಚಯ್ಯ ಪುರಾಣಿಕಮಠ(37), ತಾಳಿಕೋಟಿ ತಾಲ್ಲೂಕಿನ ಜಲಪೂರದ ಪುಷ್ಪಾವತಿ ಶಿವಪುತ್ರಯ್ಯ ಹಿರೇಮಠ (55) ಮೃತರು. ಮಾಜಿ ಸೈನಿಕರಾಗಿದ್ದ ದೊಡ್ಡಯ್ಯ ಹಾಗೂ ಪುಷ್ಪಾವತಿ ಸಹೋದರ,ಸಹೋದರಿಯರು.

ಕಾರಿನಲ್ಲಿದ್ದ ಮಸಬಿನಾಳದ ಈರಮ್ಮ ದೊಡ್ಡಯ್ಯ ಪುರಾಣಿಕಮಠ(30), ಶಿವಕುಮಾರ ದೊಡ್ಡಯ್ಯ ಪುರಾಣಿಕಮಠ(11), ಸಂಪತಕುಮಾರ ದೊಡ್ಡಯ್ಯ ಪುರಾಣಿಕಮಠ(8) ಗಾಯಗೊಂಡಿದ್ದಾರೆ.

ADVERTISEMENT

ಮದುವೆಗೆ ಹೋಗಿ ವಾಪಸ್ ಊರಿಗೆ ತೆರಳುವ ಸಂದರ್ಭದಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದಿತ್ತು. ಸ್ಥಳಕ್ಕೆ ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.