ADVERTISEMENT

ತಾಳಿಕೋಟೆ ಬಸ್‌ ನಿಲ್ದಾಣದಲ್ಲಿ ಮಾಂಗಲ್ಯ ಸರ ಎಗರಿಸಿದ ಕಳ್ಳ: ಸಿಸಿಟಿವಿಯಲ್ಲಿ ಸೆರೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 5:58 IST
Last Updated 3 ಸೆಪ್ಟೆಂಬರ್ 2021, 5:58 IST
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ   

ವಿಜಯಪುರ:ತಾಳಿಕೋಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಸರಗಳ್ಳ, ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸೆಪ್ಟೆಂಬರ್ 1ರಂದು ರೇಣುಕಾ ಪಾಟೀಲ ಎಂಬುವವರು ಯಾದಗಿರಿ ಜಿಲ್ಲೆಯ ದೊರಹಳ್ಳಿಗೆ ತೆರಳಲು ಬಸ್ ಗಾಗಿ ಕಾಯುತ್ತಾ ಕುಳಿತಿದ್ದ ವೇಳೆ ಅವರ ಬಳಿಯೇ ಹೊಂಚುಹಾಕಿ ನಿಂತಿದ್ದ ಕಳ್ಳ ಏಕಾಏಕಿ ಕೊರಳಿಗೆ ಕೈಹಾಕಿ 38 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ.

ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.