ADVERTISEMENT

ವಿಜಯಪುರ | ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್: ಸಂಭ್ರಮಾಚರಣೆ 

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2023, 15:55 IST
Last Updated 23 ಆಗಸ್ಟ್ 2023, 15:55 IST
ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಆಗಿರುವುದಕ್ಕೆ ಬಸವನಬಾಗೇವಾಡಿಯಲ್ಲಿ ಸಚಿವ ಶಿವಾನಂದ ಪಾಟೀಲರು ಬೆಂಬಲಿಗರೊಂದಿಗೆ ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಆಗಿರುವುದಕ್ಕೆ ಬಸವನಬಾಗೇವಾಡಿಯಲ್ಲಿ ಸಚಿವ ಶಿವಾನಂದ ಪಾಟೀಲರು ಬೆಂಬಲಿಗರೊಂದಿಗೆ ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.   

ಬಸವನಬಾಗೇವಾಡಿ: ಕೋಟ್ಯಂತರ ಭಾರತೀಯರ ಜನರ ಕನಸು ನನಸು ಮಾಡಿದ ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದ್ದಕ್ಕೆ ಬಹಳ ಹೆಮ್ಮೆಯಾಗಿದೆ ಎಂದು ಜವಳಿ ಮತ್ತು ಕಬ್ಬು ಅಭಿವೃದ್ಧಿ ಸಕ್ಕರೆ ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದ್ದಕ್ಕೆ ಬುಧವಾರ ಸಂಜೆ ಪಟ್ಟಣದಲ್ಲಿ ಸಚಿವರು ತಮ್ಮ ಬೆಂಬಲಿಗರೊಂದಿಗೆ ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ನಂತರ ಮಾತನಾಡಿದರು.

ರಾಷ್ಟ್ರೀಯ ಬಸವ ಸೈನ್ಯ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಭರತ್ ಅಗರವಾಲ, ಜೀವನ ಮ್ಯಾಗೇ,ರಿ ಬಸವರಾಜ ನಾಯ್ಕೋಡಿ, ಅನಿಲ ಪವಾರ, ಶಿವಾನಂದ ತೊಳನೂರ, ಬಸವರಾಜ ಚಿಂಚೋಳಿ, ಪ್ರವೀಣ ಪಾಟೀಲ, ಶಿವು ಮಡಿಕೇಶ್ವರ, ಕೊಟ್ರೇಶಿ ಹೆಗಡ್ಯಾಳ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.