ADVERTISEMENT

ಚಿಕ್ಕಗಲಗಲಿ ಬ್ಯಾರೇಜ್‌ಗೆ ಗಂಗಾಪೂಜೆ ಇಂದು

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 12:20 IST
Last Updated 22 ಜೂನ್ 2021, 12:20 IST
ತುಂಬಿ ಹರಿಯುತ್ತಿರುವ ಚಿಕ್ಕಗಲಗಲಿ ಗ್ರಾಮದ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ಯಾರೇಜ್ 
ತುಂಬಿ ಹರಿಯುತ್ತಿರುವ ಚಿಕ್ಕಗಲಗಲಿ ಗ್ರಾಮದ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ಯಾರೇಜ್    

ವಿಜಯಪುರ: ಚಿಕ್ಕಗಲಗಲಿ ಗ್ರಾಮದ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನೂತನ ಜಾಕೆಟಿಂಗ್ ತಂತ್ರಜ್ಞಾನದ ಬ್ಯಾರೇಜ್ ತುಂಬಿ ಹರಿಯತೊಡಗಿದೆ.

ಶಾಸಕ ಎಂ.ಬಿ.ಪಾಟೀಲ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ವಿಜಯಪುರ ಮತ್ತು ಬಾಗಲಕೋಟೆ ಅವಳಿ ಜಿಲ್ಲೆಯ ರೈತರಿಗೆ ಅನುಕೂಲವಾಗಲು ನೂತನ ತಂತ್ರಜ್ಞಾನ ಬಳಸಿ, ಹಾಲಿ ಇದ್ದ ಬ್ಯಾರೇಜ್‍ನ್ನು ಬಲಪಡಿಸಿ, ಎತ್ತರಿಸುವ ಕಾಮಗಾರಿಗೆ ಹೆಚ್ಚಿನ ಮುತುವರ್ಜಿ ವಹಿಸಿ, ಚಾಲನೆ ನೀಡಿದ್ದರು.

ಈ ಕಾಮಗಾರಿಗೆ ₹ 54 ಕೋಟಿ ವೆಚ್ಚವಾಗಿದ್ದು, ಇದೀಗ ಮಳೆ ಹಾಗೂ ಮೇಲ್ಭಾಗದ ಹಿಪ್ಪರಗಿ ಆಣೆಕಟ್ಟಿನಿಂದ ನೀರು ಬಿಟ್ಟಿದ್ದರಿಂದ ಬ್ಯಾರೇಜ್ ಸಂಪೂರ್ಣ ಜಲಾವೃತವಾಗಿದೆ.

ADVERTISEMENT

ಕಾಮಗಾರಿ ಪೂರ್ಣಗೊಂಡ ನಂತರ ಪ್ರಥಮ ಬಾರಿಗೆ ನೀರು ತುಂಬಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಗಂಗಾಪೂಜೆಯನ್ನು ಜೂನ್‌ 23 ಬೆಳಿಗ್ಗೆ 10ಕ್ಕೆ ಏರ್ಪಡಿಸಿದ್ದು, ಬ್ಯಾರೇಜ್ ರೂವಾರಿ ಎಂ.ಬಿ.ಪಾಟೀಲ ಅವರು ಗಂಗಾಪೂಜೆ ನೆರವೇರಿಸಲಿದ್ದಾರೆ ಎಂದು ಎಚ್.ಎಸ್.ಕೋರಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.