
ಆಲಮಟ್ಟಿ: ಸಮೀಪದ ಚಿಮ್ಮಲಗಿ ಭಾಗ-2ರ ಅರಳೆಲೆ ಕಟ್ಟಿಮನಿ ಹಿರೇಮಠದ ಲಿಂಗೈಕ್ಯ ನೀಲಕಂಠ ಸ್ವಾಮೀಜಿಗಳ ತೃತೀಯ ಪುಣ್ಯಸ್ಮರಣೆ ನಿಮಿತ್ತ ಗ್ರಾಮದಲ್ಲಿ ಅಡ್ಡಪಲ್ಲಕ್ಕಿ ಉತ್ಸವ, ಧರ್ಮ ಸಭೆ, ಧಾರ್ಮಿಕ ಕಾರ್ಯಕ್ರಮಗಳು, ಜಾತ್ರೆ ಭಾನುವಾರ ಜರುಗಿದವು.
ಧರ್ಮಸಭೆಯಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ, ‘ಹಿಂದೂ ಧರ್ಮ ಜಗತ್ತಿನ ವಿವಿಧ ಧರ್ಮಗಳಿಗೆ ಮಾತೃ ಧರ್ಮವಾಗಿದೆ. ವಿವಿಧತೆಯಲ್ಲಿ ಏಕತೆ ಸಾರುತ್ತದೆ. ಹೀಗಾಗಿ ಈ ಧರ್ಮವನ್ನು ನಾಶ ಮಾಡಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ’ ಎಂದರು.
ಜೆಡಿಎಸ್ ಮುಖಂಡ ಸೋಮನಗೌಡ ಪಾಟೀಲ (ಮನಗೂಳಿ), ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವಾನಂದ ಅವಟಿ, ಸತ್ಯಜೀತ ಪಾಟೀಲ, ಸಹಕಾರ ಮಹಾಮಂಡಳದ ನಿರ್ದೇಶಕ ಐ.ಸಿ. ಪಟ್ಟಣಶೆಟ್ಟಿ, ಚಂದ್ರಶೇಖರಗೌಡ ಪಾಟೀಲ, ತಾನಾಜಿ ನಾಗರಾಳ ಮಾತನಾಡಿದರು.
ತಡವಲಗಾದ ಅಭಿನವ ರಾಚೋಟೇಶ್ವರ ಸ್ವಾಮೀಜಿ, ಕನ್ನೂರಿನ ಸೋಮನಾಥ ಸ್ವಾಮೀಜಿ, ಬಸವನಬಾಗೇವಾಡಿಯ ಶಿವಪ್ರಕಾಶ ಸ್ವಾಮೀಜಿ, ಆಲಮೇಲದ ಚಂದ್ರಶೇಖರ ಸ್ವಾಮೀಜಿ, ಗುಂಡಕನಾಳದ ಗುರುಲಿಂಗ ಸ್ವಾಮೀಜಿ, ಇಂಗಳೇಶ್ವರದ ಭೃಂಗೇಶ್ವರಲಿಂಗ ಸ್ವಾಮೀಜಿ ಪಾಲ್ಗೊಂಡಿದ್ದರು.
ಚಿಮ್ಮಲಗಿ ಅರಳೆಲೆ ಕಟ್ಟಿಮನಿ ಹಿರೇಮಠದ ಸಿದ್ಧರೇಣುಕ ಸ್ವಾಮೀಜಿಯವರ ಅಡ್ಡಪಲ್ಲಕ್ಕಿ ಮಹೋತ್ಸವದ ಮೆರವಣಿಗೆ ಗ್ರಾಮದ ತುಂಬ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.