ADVERTISEMENT

ಮೊಹರೆ ಅಧ್ಯಯನ ಪೀಠ ಆರಂಭಕ್ಕೆ ಒತ್ತಾಯ

ಪತ್ರಕರ್ತರ ಸಮಾವೇಶದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 15:16 IST
Last Updated 4 ಫೆಬ್ರುವರಿ 2023, 15:16 IST
ವಿಜಯಪುರ ನಗರದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರು –ಪ್ರಜಾವಾಣಿ ಚಿತ್ರ
ವಿಜಯಪುರ ನಗರದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರು –ಪ್ರಜಾವಾಣಿ ಚಿತ್ರ   

ವಿಜಯಪುರ: ಪತ್ರಕರ್ತ ಮೊಹರೆ ಹನುಮಂತ ರಾಯರ ಹೆಸರಲ್ಲಿ ರಾಜ್ಯದ ಯಾವುದಾದರೂ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಆರಂಭಿಸುವುದು ಸೇರಿದಂತೆ ಪ್ರಮುಖ ನಿರ್ಣಯಗಳನ್ನು ಶನಿವಾರ ನಗರದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಮಾವೇಶದ ಪ್ರತಿನಿಧಿಗಳ ಸಮಾವೇಶದಲ್ಲಿ ಕೈಗೊಳ್ಳಲಾಯಿತು.

ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ನಡೆದ ಪ್ರತಿನಿಧಿಗಳ ಪತ್ರಕರ್ತರ 38ನೇ ರಾಜ್ಯ ಸಮ್ಮೇಳನವನ್ನು ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆಸಲು ತೀರ್ಮಾನಿಸಲಾಯಿತು.

ಪ್ರಮುಖ ನಿರ್ಣಯಗಳು:

ADVERTISEMENT

ಪತ್ರಕರ್ತರನ್ನು ಯಶಸ್ವಿನಿ ಯೋಜನೆ ವ್ಯಾಪ್ತಿಗೆ ತರಬೇಕು, ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಯೋಜನೆ ಜಾರಿಯಾಗಬೇಕು. ನಿವೃತ್ತ ಪತ್ರಕರ್ತರಿಗೆ ಪಿಂಚಣಿ ಯೋಜನೆಯಡಿ ನೀಡುವ ಗೌರವಧನವನ್ನು ₹ 20 ಸಾವಿರಕ್ಕೆ ಏರಿಕೆ ಮಾಡಬೇಕು. ಪತ್ರಕರ್ತರ ಚಿಕಿತ್ಸಾ ವೆಚ್ಚಕ್ಕೆ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಿ, ₹ 100 ಕೋಟಿ ಅನುದಾನ ನೀಡಬೇಕು.

ರಾಜ್ಯದ ಎಲ್ಲ ಪತ್ರಕರ್ತರ ಭವನ ನಿರ್ವಹಣೆಯನ್ನು ಕೆಯು ಡಬ್ಲ್ಯು ಜೆಗೆ ವಹಿಸಬೇಕು. ವಿಧಾನ ಪರಿಷತ್ ಗೆ ಸರ್ಕಾರ ನಾಮಕರಣ ಮಾಡುವಾಗ ಹಿರಿಯ ಪತ್ರಕರ್ತರಿಗೆ ಅವಕಾಶ ನೀಡಬೇಕು

₹10 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ಪತ್ರಕರ್ತರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಸೇರಿಸಿ, ನೆರವು, ಸೌಲಭ್ಯ ನೀಡಬೇಕು.

ನಗರ, ಪಟ್ಟಣಗಳಲ್ಲಿ ವಸತಿ, ನಿವೇಶನ ನೀಡವಲ್ಲಿ ಪತ್ರಕರ್ತರಿಗೆ ಶೇ 10ರಷ್ಟು ಕಾಯ್ದಿರಿಸಬೇಕು. ಸರ್ಕಾರ ಪ್ರತಿ ವರ್ಷ ಜಾಹೀರಾತು ದರ ಪರಿಷ್ಕರಣೆ ಮಾಡಿ, ದರ ಹೆಚ್ಚಳ ಮಾಡಬೇಕು.

ನಿರ್ಣಯಗಳಿಗೆ ತಮ್ಮಉದ್ಘಾಟನಾ ಭಾಷಣದಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಹುತೇಕ ನಿರ್ಣಯಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.