ADVERTISEMENT

ವಿಜಯಪುರ: ರಾಹುಲ್ ಗಾಂಧಿ ಮೇಲೆ ದೌರ್ಜನ್ಯಕ್ಕೆ ಖಂಡನೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 15:41 IST
Last Updated 1 ಅಕ್ಟೋಬರ್ 2020, 15:41 IST

ವಿಜಯಪುರ: ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೀಡಾದ ಯುವತಿಯ ಕುಟುಂಬದವರಿಗೆ ಸಾಂತ್ವನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಾರನ್ನು ತಡೆದು ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ ಎಂದು ಬಿಎಸ್‌ಪಿ ಮುಖಂಡ ಶ್ರೀನಾಥ್ ಪೂಜಾರಿ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಇದೆಯೋ ಅಥವಾ ಸರ್ವಾಧಿಕಾರಿ ಆಡಳಿತದ ರಾಜ್ಯವಾಗಿದೆಯೋ ಎಂಬ ಪ್ರಶ್ನೆ ಉದ್ಭವಿಸುತ್ತಿದು, ರಾಹುಲ್ ಗಾಂಧಿ ಅಂತಹ ಒಂದು ಪಕ್ಷದ ರಾಷ್ಟ್ರ ಮಟ್ಟದ ನಾಯಕರ ಮೇಲೆ ಈ ರೀತಿ ದೌರ್ಜನ್ಯ ನಡೆಯುತ್ತದೆ ಎಂದ ಮೇಲೆ ಆ ರಾಜ್ಯದಲ್ಲಿ ಮಹಿಳೆಯರ ಗತಿಯನೂ ಎಂದು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ರಾಜೀನಾಮೆ ಪಡೆಯಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.