ADVERTISEMENT

ಏಪ್ರಿಲ್ 26ಕ್ಕೆ ರಾಹುಲ್‌ ಗಾಂಧಿ ವಿಜಯಪುರಕ್ಕೆ

ಸಚಿವ ಎಂ.ಬಿ.ಪಾಟೀಲರಿಂದ ಮಾಹಿತಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 13:43 IST
Last Updated 23 ಏಪ್ರಿಲ್ 2024, 13:43 IST
<div class="paragraphs"><p>ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರರ್ಥ ಏಪ್ರಿಲ್‌ 26ರಂದು ವಿಜಯಪುರಕ್ಕೆ ರಾಹುಲ್‌ ಗಾಂಧಿ ಆಗಮಿಸಲಿದ್ದಾರೆ</p></div>

ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರರ್ಥ ಏಪ್ರಿಲ್‌ 26ರಂದು ವಿಜಯಪುರಕ್ಕೆ ರಾಹುಲ್‌ ಗಾಂಧಿ ಆಗಮಿಸಲಿದ್ದಾರೆ

   

ವಿಜಯಪುರ: ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರರ್ಥ ಏಪ್ರಿಲ್‌ 26ರಂದು ವಿಜಯಪುರಕ್ಕೆ ರಾಹುಲ್‌ ಗಾಂಧಿ ಆಗಮಿಸಲಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ಅಂದು ಬೆಳಿಗ್ಗೆ 11ಕ್ಕೆ ನಗರದ ಸೋಲಾಪುರ ರಸ್ತೆಯಲ್ಲಿರುವ ಬಿಎಲ್‌ಡಿಇ ಹೊಸ ಕ್ಯಾಂಪಸ್‌ ಆವರಣದಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.