ADVERTISEMENT

ಕೋವಿಡ್‌: ಸುರಕ್ಷಾ ನಿಯಮ ಪಾಲಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 12:28 IST
Last Updated 8 ಜುಲೈ 2020, 12:28 IST
ಸುನೀಲಗೌಡ ಪಾಟೀಲ್
ಸುನೀಲಗೌಡ ಪಾಟೀಲ್   

ವಿಜಯಪುರ: ಕೊರೊನಾ ವೈರಸ್‌ ಗಾಳಿಯಲ್ಲೂ ಹರಡುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿರುವುದರಿಂದ ಸಾರ್ವಜನಿಕರು ಸರ್ಕಾರ ರೂಪಿಸಿರುವ ಸುರಕ್ಷಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಮನವಿ ಮಾಡಿದ್ದಾರೆ.

ಅಂತರ್ ರಾಜ್ಯ, ಅಂತರ್ ಜಿಲ್ಲೆ ಮತ್ತು ವಿವಿಧ ಗ್ರಾಮಗಳಿಂದ ನಾನಾ ಕಾರಣಗಳಿಗಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿದ್ದಾರೆ. ಇದರಿಂದ ಕಾಯಿಲೆ ಬಹು ಬೇಗ ಹರಡುವ ಸಾಧ್ಯತೆ ಇರುವುದರಿಂದ ಅನಗತ್ಯ ಸಂಚಾರವನ್ನು ಜನರು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಕೋವಿಡ್‌ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೂ ಸಹ ಈ ಕಾಯಿಲೆ ಕಾಡುತ್ತಿದೆ. ಅಲ್ಲದೇ, ಈಗಾಗಲೇ ಅನೇಕ ಖಾಸಗಿ ಆಸ್ಪತ್ರೆಗಳು ಬಂದಾಗಿವೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ವಾರ್ಡ್‍ಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ADVERTISEMENT

ಕೋವಿಡ್‌ನಿಂದ ಮುಂದಿನ ದಿನಗಳಲ್ಲಿ ಭಯಾನಕ ವಾತಾವರಣ ಸೃಷ್ಠಿಯಾಗುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರು ಅನಗತ್ಯವಾಗಿ ಸಂಚರಿಸುವುದನ್ನು ನಿಲ್ಲಿಸಬೇಕು. ಕಡ್ಡಾಯವಾಗಿ ಅಂತರವನ್ನು ಕಾಪಾಡಬೇಕು. ಮಾಸ್ಕ್‌ ಧರಿಸುವುದು ಮತ್ತು ಸ್ಯಾನಿಟೈಸರ್ ಬಳಸುವುದು ಸೇರಿದಂತೆ ಅಗತ್ಯ ಸುರಕ್ಷಾ ಕ್ರಮಗಳನ್ನು ಅನುಸರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.