ವಿಜಯಪುರ: ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ಸೋಮವಾರ ನಗರದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣದ ಹಂತದಲ್ಲಿರುವ ಸೈಕ್ಲಿಂಗ್ ವೆಲೊಡ್ರೋಮ್ ಕಾಮಗಾರಿ ಪರಿಶೀಲನೆ ಮಾಡಿದರು.
ವೆಲೊಡ್ರೋಮ್ ಕಾಮಗಾರಿ ಬಗ್ಗೆ ಕ್ರೀಡಾ ಇಲಾಖೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಂದ ಮಾಹಿತಿ ಪಡೆದ ಅವರು, ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಸೂಚಿಸಿದರು.
ಬಳಿಕ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಅಥ್ಲೆಟಿಕ್ ಸಿಂಥೆಟಿಕ್ ಟ್ರ್ಯಾಕ್, ವಾಲಿಬಾಲ್ ಮೈದಾನ, ಬ್ಯಾಸ್ಕೆಟ್ಬಾಲ್ ಮೈದಾನ, ಈಜುಗೊಳ, ಒಳಾಂಗಣ ಕ್ರೀಡಾಂಗಣ ಹಾಗೂ ವಾಣಿಜ್ಯ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಸಹಾಯಕ ಆಯುಕ್ತ ಬಲರಾಮ ಲಮಾಣಿ, ಕಾರ್ಯನಿರ್ವಾಹಕ ಎಂಜಿನಿಯರ್ ಹೀರೇಗೌಡರ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ರಾಜ್ಯ ಸೈಕ್ಲಿಂಗ್ ಸಂಸ್ಥೆಯ ಅಧ್ಯಕ್ಷ ರಾಜು ಬಿರಾದಾರ, ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಭೀಮಸೇನ ಕೋಕರೆ, ಸಹಾಯಕ ನಿರ್ದೇಶಕ ಕ್ರೀಡಾ ಇಲಾಖೆಎಸ್.ಜಿ.ಲೋಣಿ, ವಿವಿಧ ಕ್ರೀಡಾ ಸಂಸ್ಥೆಯ ಪದಾಧಿಕಾರಿಗಳು, ತರಬೇತಿದಾರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.