ADVERTISEMENT

ಗುಣಮಟ್ಟ ರಸ್ತೆ ಕಾಮಗಾರಿಗೆ ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2022, 12:26 IST
Last Updated 9 ಜನವರಿ 2022, 12:26 IST
ವಿಜಯಪುರ ಮಹಾನಗರ ಪಾಲಿಕೆ ಹಾಗೂ ನಿರ್ಮಿತಿ ಕೇಂದ್ರದಿಂದ ನಗರ ವ್ಯಾಪ್ತಿಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಭಾನುವಾರ ಪರಿಶೀಲಿಸಿದರು. ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಇದ್ದಾರೆ
ವಿಜಯಪುರ ಮಹಾನಗರ ಪಾಲಿಕೆ ಹಾಗೂ ನಿರ್ಮಿತಿ ಕೇಂದ್ರದಿಂದ ನಗರ ವ್ಯಾಪ್ತಿಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಭಾನುವಾರ ಪರಿಶೀಲಿಸಿದರು. ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಇದ್ದಾರೆ   

ವಿಜಯಪುರ: ಮಹಾನಗರ ಪಾಲಿಕೆ ಹಾಗೂ ನಿರ್ಮಿತಿ ಕೇಂದ್ರದಿಂದ ನಗರ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ರಸ್ತೆ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಭಾನುವಾರ ಪರಿಶೀಲಿಸಿದರು.

ನಗರದ ಬಾಗಲಕೋಟೆ ಕ್ರಾಸ್‍ನಿಂದ ಆರ್. ಟಿ. ಓ ಕಚೇರಿ ವರೆಗೆ,ಕೇಂದ್ರ ಬಸ್ ನಿಲ್ದಾಣದಿಂದ ಮೀನಾಕ್ಷಿ ಸರ್ಕಲ್‍ ವರೆಗೆ,ಜೋಡಗುಮ್ಮಟದಿಂದ ತಾಜ್‌ ಬಾವಡಿಯವರೆಗೆ ಹಾಗೂಸರಾಫ್ ಬಜಾರ ರಸ್ತೆಯ ಕಾಮಗಾರಿ ಪರಿಶೀಲಿಸಿದರು.

ದುರಸ್ತಿ ಕಾಮಗಾರಿ ನಡೆಯುತ್ತಿರುವ ರಸ್ತೆಯಲ್ಲಿ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಯು.ಜಿ.ಡಿ ಚೇಂಬರ್ ಕವರ್‌ಗಳನ್ನು ಸರಿಯಾಗಿ ನಿರ್ಮಿಸಬೇಕು ಹಾಗೂ ರಸ್ತೆ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ರಸ್ತೆಯ ಎರಡು ಬದಿ ಮಳೆ ನೀರು ಸರಾಗವಾಗಿ ಹೋಗಲು ಚರಂಡಿ ಹೂಳನ್ನು ತೆಗೆಸಬೇಕು ಹಾಗೂಕಾಲಕಾಲಕ್ಕೆ ಈ ಕಾಮಗಾರಿಗಳ ಮೇಲ್ವಿಚಾರಣೆ ನಡೆಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.