ADVERTISEMENT

ವಿಜಯಪುರ: ‘ನನ್ನ ಮತ ನನ್ನ ಹಕ್ಕು’ ಜಾಗೃತಿ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 4:51 IST
Last Updated 15 ಸೆಪ್ಟೆಂಬರ್ 2025, 4:51 IST
ವಿಜಯಪುರ ನಗರದ ಗೋಳಗುಮ್ಮಟ ಆವರಣದಲ್ಲಿ ಭಾನುವಾರ ‘ನನ್ನ ಮತ ನನ್ನ ಹಕ್ಕು’ ಜಾಗೃತಿ ಅಭಿಯಾನದ  ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಡಾ. ಕೆ.ಆನಂದ್‌ ಚಾಲನೆ ನೀಡಿದರು 
ವಿಜಯಪುರ ನಗರದ ಗೋಳಗುಮ್ಮಟ ಆವರಣದಲ್ಲಿ ಭಾನುವಾರ ‘ನನ್ನ ಮತ ನನ್ನ ಹಕ್ಕು’ ಜಾಗೃತಿ ಅಭಿಯಾನದ  ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಡಾ. ಕೆ.ಆನಂದ್‌ ಚಾಲನೆ ನೀಡಿದರು    

ವಿಜಯಪುರ: ಅಂತರರಾಷ್ಟ್ರಿಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ‘ನನ್ನ ಮತ ನನ್ನ ಹಕ್ಕು’ ಜಾಗೃತಿ ಅಭಿಯಾನದ ಅಂಗವಾಗಿ ಭಾನುವಾರ ನಗರದ ಗೋಳಗುಮ್ಮಟ ಆವರಣದಲ್ಲಿ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಡಾ.ಕೆ. ಆನಂದ್‌ ಚಾಲನೆ ನೀಡಿದರು.

ರಾಜಧಾನಿ ಬೆಂಗಳೂರಿನಲ್ಲಿ ಸೆ.15ರಂದು ಬೃಹತ್ ಕಾರ್ಯಕ್ರಮ ಆಯೊಜಿಸಲಾಗಿದ್ದು, ಪ್ರಜಾಪ್ರಭುತ್ವದ ಕುರಿತು ಎಲ್ಲ ಜಿಲ್ಲೆಗಳಿಂದ ಪ್ರತಿನಿಧಿಗಳನ್ನು ಬೈಕ್ ಮೂಲಕ ಪಾಲ್ಗೊಳ್ಳಲಿದ್ದಾರೆ. ನಮ್ಮ ಜಿಲ್ಲೆಯಿಂದಲೂ ಬೈಕ್ ರ‍್ಯಾಲಿ ಮೂಲಕ ಯುವಕರು ಪ್ರತಿನಿಧಿಸುತ್ತಿದ್ದಾರೆ. ಭವ್ಯವಾದ ಪ್ರಜಾಪ್ರಭುತ್ವ ಪಡೆದ ನಾವುಗಳು ಅದರ ಪಾಲನೆಯನ್ನು ಮಾಡುವುದು ಬಹಳ ಅವಶ್ಯ ಇದೆ ಎಂದು ಹೇಳಿದರು.

ಬೈಕ್ ರ‍್ಯಾಲಿ ಸುರಕ್ಷಿತವಾಗಿ ತಲುಪುವಂತೆ ಶುಭ ಕೋರಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷಣ ನಿಂಬರಗಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಶಾಂತ್ ಪೂಜಾರಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಜೆ ಇಂಡಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.