ADVERTISEMENT

ಧೂಳಖೇಡ ಚೆಕ್‌ಪೋಸ್ಟ್‌: ಎಸ್‌ಪಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2022, 13:59 IST
Last Updated 3 ಜನವರಿ 2022, 13:59 IST
ಮಹಾರಾಷ್ಟ್ರ ಗಡಿ ಭಾಗದ ವಿಜಯಪುರ ಜಿಲ್ಲೆಯ ಧೂಳಖೇಡ ಚೆಕ್‌ ಪೋಸ್ಟ್‌ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು
ಮಹಾರಾಷ್ಟ್ರ ಗಡಿ ಭಾಗದ ವಿಜಯಪುರ ಜಿಲ್ಲೆಯ ಧೂಳಖೇಡ ಚೆಕ್‌ ಪೋಸ್ಟ್‌ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು   

ವಿಜಯಪುರ: ನೆರೆಯ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಯ ಧೂಳಖೇಡ ಚೆಕ್‌ ಪೋಸ್ಟ್‌ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಕೋವಿಡ್‌ ಮೂರನೇ ಅಲೆ ನಿಯಂತ್ರಣಕ್ಕೆ ಗಡಿಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳನ್ನು ಎಸ್‌ಪಿ ಖುದ್ದಿ ಪರಿಶೀಲಿಸಿದರು.

ಪ್ರತಿ ದಿನ ಸಂಚರಿಸುವ ಅಂತರರಾಜ್ಯ ವಾಹನಗಳನ್ನು ಮತ್ತು ಸಾರ್ವಜನಿಕರನ್ನು ಕಡ್ಡಾಯವಾಗಿ ಕೋವಿಡ್‌ ತಪಾಸಣೆಗೆ ಒಳಪಡಿಸಬೇಕು. ಕೋವಿಡ್‌ ಲಸಿಕೆ ಎರಡು ಡೋಸ್‌ ಪಡೆದುಕೊಂಡಿರುವವರಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಅಧಿಕಾರಿ,ಸಿಬ್ಬಂದಿಗೆ ಸೂಚಿಸಿದರು.

ADVERTISEMENT

ಹೊರ ರಾಜ್ಯದಿಂದ ಜಿಲ್ಲೆಗೆ ಅನಧೀಕೃತವಾಗಿ ಪ್ರಯಾಣಿಕರು ಪ್ರವೇಶಿಸದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳುವಂತೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.