ADVERTISEMENT

ಸಕಾಲದಲ್ಲಿ ಅರ್ಜಿ ವಿಲೇವಾರಿ ಮಾಡಿ: ತಹಶೀಲ್ದಾರ್‌ ಮೋಹನಕುಮಾರಿ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 11:45 IST
Last Updated 4 ಡಿಸೆಂಬರ್ 2020, 11:45 IST
ವಿಜಯಪುರ ತಾಲ್ಲೂಕು ತಹಶೀಲ್ದಾರ್‌ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಸಕಾಲ’ ಸಪ್ತಾಹ ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ಮೋಹನಕುಮಾರಿ ಕರಪತ್ರ ಬಿಡುಗಡೆ ಮಾಡಿದರು
ವಿಜಯಪುರ ತಾಲ್ಲೂಕು ತಹಶೀಲ್ದಾರ್‌ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಸಕಾಲ’ ಸಪ್ತಾಹ ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ಮೋಹನಕುಮಾರಿ ಕರಪತ್ರ ಬಿಡುಗಡೆ ಮಾಡಿದರು   

ವಿಜಯಪುರ: ಸಾರ್ವಜನಿಕರಿಗೆ ಸಕಾಲ ಯೋಜನೆಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಸಕಾಲದಡಿ ಅರ್ಜಿಗಳನ್ನು ಸ್ವೀಕರಿಸಿ ಬಾಕಿ ಉಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ವಿಜಯಪುರ ತಹಶೀಲ್ದಾರ್‌ ಮೋಹನಕುಮಾರಿ ಹೇಳಿದರು.

ತಾಲ್ಲೂಕು ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಸಕಾಲ’ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದಅವರು, ಸಾರ್ವಜನಿಕರು ಸಪ್ತಾಹದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಸಾರಿಗೆ ಇಲಾಖೆಗಳಲ್ಲಿ ಸಕಾಲ ಸಪ್ತಾಹ ಆಚರಿಸಲಾಗುತ್ತಿದೆ ಎಂದರು.

ADVERTISEMENT

ಉಪ ತಹಶೀಲ್ದಾರ್‌ ಡಿ.ಬಿ. ಭೋವಿ, ಶಿರಸ್ತೇದಾರ ಪವಾರ, ಸಿಬ್ಬಂದಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.