
ಪ್ರಜಾವಾಣಿ ವಾರ್ತೆಮಲ್ಲನಗೌಡ ಬಿರಾದಾರ
ವಿಜಯಪುರ: ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬನಹಟ್ಟಿ ಪಿಎ ಗ್ರಾಮದಲ್ಲಿ ಶುಕ್ರವಾರ ಕಬ್ಬಿನ ಹೊಲಕ್ಕೆ ಆಕಸ್ಮಿಕವಾಗಿ ಬಿದ್ದ ಬೆಂಕಿಯನ್ನು ಆರಿಸಲು ಹೋದ ರೈತರೊಬ್ಬರು ಸಜೀವ ದಹನವಾಗಿದ್ದಾರೆ.
ಮಲ್ಲನಗೌಡ ಬಿರಾದಾರ(62) ಸಜೀವ ದಹನವಾಗಿರುವ ರೈತ ಎಂದು ಗುರುತಿಸಲಾಗಿದೆ. ತಮ್ಮ ಕಬ್ಬಿನ ಹೊಲಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ. ಈ ವೇಳೆ ಬೆಳೆಯನ್ನು ರಕ್ಷಿಸಲು ಬೆಂಕಿ ಆರಿಸಲು ಪ್ರಯತ್ನಿಸುವಾಗ ಬೆಂಕಿ ತಗುಲಿ ಸುಟ್ಟು ಹೋಗಿದ್ದಾರೆ.
ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.