ADVERTISEMENT

ವಿಜಯಪುರ: ಹಳ್ಳದಲ್ಲಿ ಕೊಚ್ಚಿ ಹೋದ ರೈತ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 10:48 IST
Last Updated 15 ಅಕ್ಟೋಬರ್ 2020, 10:48 IST
ಘಟನಾ ಸ್ಥಳದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ (ಒಳಚಿತ್ರದಲ್ಲಿ ಮೃತ ರೈತ ಶಿವಪುತ್ರ ಹಣಮಂತ ನಾಟೀಕಾರ)
ಘಟನಾ ಸ್ಥಳದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ (ಒಳಚಿತ್ರದಲ್ಲಿ ಮೃತ ರೈತ ಶಿವಪುತ್ರ ಹಣಮಂತ ನಾಟೀಕಾರ)   

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಮುಳಸಾವಳಗಿಯಲ್ಲಿ ಹಳ್ಳ ದಾಟಿ ಹೊಲಕ್ಕೆ ಹೊರಟಿದ್ದ ರೈತ ಶಿವಪುತ್ರ ಹಣಮಂತ ನಾಟೀಕಾರ(38) ನೀರಿನ ಸೆಳವಿಗೆ ಸಿಲುಕು ಕೊಚ್ಚಿಕೊಂಡು ಹೋಗಿದ್ದು, ಸುಮಾರು ಅರ್ಧ ಕಿ.ಮೀ.ದೂರದಲ್ಲಿ ದೇಹ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಮಳೆಗೆ 811 ಮನೆಗಳು ಭಾಗಶಃ ಕುಸಿದಿವೆ, ಐದು ಜಾನುವಾರುಗಳು ಸಾವಿಗೀಡಾಗಿವೆ. ದೂಳಖೇಡ, ಶಿರನಾಳ ಗ್ರಾಮದಲ್ಲಿ ಪ್ರವಾಹಕ್ಕೆ ಸಿಲುಕಿರುವ 15 ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ದೇವರ ಹಿಪ್ಪರಗಿ ತಾಲ್ಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಹಳ್ಳದ ನೀರು ಗ್ರಾಮದ 10 ಮನೆಗಳಿಗೆ ನುಗ್ಗಿರುವುದರಿಂದ, ಜನರನ್ನು ಶಾಲೆಗೆ ಸ್ಥಳಾಂತರಿಸಲಾಗಿದೆ.

ADVERTISEMENT

ಜಿಲ್ಲೆಯಲ್ಲಿ ಗುರುವಾರ ಮಳೆ ತಗ್ಗಿದೆ. ಆದರೂ ಸಹ ತಾಳಿಕೋಟೆ–ಹಡಗಿನಾಳ ನೆಲಟಮಟ್ಟದ ಸೇತುವೆ ಡೋಣಿ ಪ್ರವಾಹದಲ್ಲಿ ಮುಳುಗಿದೆ. ಎರಡು ದಿನಗಳಿಂದ ಮುಳುಗಿದ್ದ ದೇವರಹಿಪ್ಪರಗಿ–ಬಸವನ ಬಾಗೇವಾಡಿ ಸಂಪರ್ಕಿಸುವ ಸಾತಿಹಾಳ ಸೇತುವೆ ಇಂದು ಸಂಚಾರಕ್ಕೆ ಮುಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.