ADVERTISEMENT

ವಿಜಯಪುರ: ಹೆದ್ದಾರಿ ತಡೆದು ರೈತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 8:55 IST
Last Updated 25 ಸೆಪ್ಟೆಂಬರ್ 2020, 8:55 IST
ಪ್ರತಿಭಟನೆ ನಡೆಸುತ್ತಿರುವ ರೈತರು
ಪ್ರತಿಭಟನೆ ನಡೆಸುತ್ತಿರುವ ರೈತರು   

ವಿಜಯಪುರ: ಇಲ್ಲಿನ ಸಿಂದಗಿ ಬೈಪಾಸ್ ಬಳಿ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಿದರು.

ರೈತ ಮುಖಂಡ ಶಕ್ತಿಕುಮಾರ ಉಕಮನಾಳ ನೇತೃತ್ವದಲ್ಲಿ ರೈತರು ಹೆದ್ದಾರಿ ತಡೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಭೂ ಸುಧಾರಣಾ ತಿದ್ದುಪಡೆ ಕಾಯ್ದೆ, ಎ.ಪಿ.ಎಂ.ಸಿ. ತಿದ್ದುಪಡಿ ಕಾಯ್ದೆ ಜಾರಿಗೆ ತಂದಿರುವುದನ್ನು ವಿರೋಧಿಸಿದರು. ಸಾರ್ವಜನಿಕ ವಲಯಗಳನ್ನು ಖಾಸಗೀಕರಣಗೊಳಿಸುವದನ್ನು ಖಂಡಿಸಿದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.