ADVERTISEMENT

ಭೂಮಿ ಕಂಪಿಸಿದ ಅನುಭವ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2019, 16:02 IST
Last Updated 10 ಡಿಸೆಂಬರ್ 2019, 16:02 IST

ತಿಕೋಟಾ (ವಿಜಯಪುರ): ತಾಲ್ಲೂಕಿನ ಮಲಕನದೇವರಹಟ್ಟಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಭೂಮಿ ಕಂಪಿಸಿದ ಅನುಭವ ಆಗಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ.

15 ದಿನಗಳಿಂದ ದಿನಕ್ಕೆ 3–4 ಬಾರಿ ಭೂಮಿ ಕಂಪಿಸುತ್ತಿದ್ದು, ಭೂಮಿಯಿಂದ ಜೋರು ಶಬ್ದ ಕೇಳಿ ಬಂದಿದೆ. ಎರಡು ವರ್ಷಗಳ ಹಿಂದೆ ಇದೇ ರೀತಿ ಶಬ್ದ ಬರುತ್ತಿತ್ತು. ಹಲವು ಮನೆಗಳು ಬಿರುಕು ಬಿಟ್ಟಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮಲಕನದೇವರಹಟ್ಟಿ ಸುತ್ತಲಿನ ಸೋಮದೇವರಹಟ್ಟಿ, ಹುಬನೂರ, ಟಕ್ಕಳಕಿ, ಕಳ್ಳಕವಟಗಿ ಗ್ರಾಮಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದರು. ಎರಡು ವರ್ಷಗಳ ಹಿಂದೆ ಭಯಂಕರ ಶಬ್ದ ಕೇಳಿ ಬಂದಿದ್ದರಿಂದ ಹುಬನೂರ ಸರ್ಕಾರಿ ಶಾಲೆಯಲ್ಲಿ ಭೂಕಂಪನ ಮಾಪನ ಅಳವಡಿಸಲಾಗಿತ್ತು.

ADVERTISEMENT

ಗಣಿ ಮತ್ತು ಭೂ ವಿಜ್ಞಾನಿಗಳು, ತಿಕೋಟಾ ತಹಶಿಲ್ದಾರ್ ಎಸ್.ಎಂ.ಮ್ಯಾಗೇರಿ ನೇತೃತ್ವದ ತಂಡವು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.